AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army: ಸಿಕ್ಕಿಂನಲ್ಲಿ ಸೇನಾ ಟ್ರಕ್ ಕಮರಿಗೆ ಬಿದ್ದು 16 ಮಂದಿ ಯೋಧರು ಸಾವು

ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ. ಸೇನಾ ಟ್ರಕ್ ಸಿಕ್ಕಿಂನಲ್ಲಿ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿದಂತೆ 16 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

Indian Army: ಸಿಕ್ಕಿಂನಲ್ಲಿ ಸೇನಾ ಟ್ರಕ್ ಕಮರಿಗೆ ಬಿದ್ದು 16 ಮಂದಿ ಯೋಧರು ಸಾವು
16 Army soldiers killed in Sikkim as army truck fell into gorge
TV9 Web
| Edited By: |

Updated on:Dec 23, 2022 | 4:49 PM

Share

ಸಿಕ್ಕಿಂ: ಸಿಕ್ಕಿಂನಲ್ಲಿ (Sikkim) ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ಮಂದಿ ಭಾರತೀಯ ಸೈನಿಕರು (Indian Army) ಸಾವನ್ನಪ್ಪಿದ್ದಾರೆ. ಸೇನಾ ಟ್ರಕ್ ಸಿಕ್ಕಿಂನಲ್ಲಿ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿದಂತೆ 16 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಇದು 3-ವಾಹನದ ಬೆಂಗಾವಲು ಪಡೆಯ ಭಾಗವಾಗಿತ್ತು ಎಂದು ಸೇನೆಯು ಹೇಳಿತು, ಅದು ಬೆಳಿಗ್ಗೆ ಚಟೆನ್‌ನಿಂದ ಥಾಂಗು ಕಡೆಗೆ ಚಲಿಸಿತು. ಝೆಮಾ ಮಾರ್ಗದಲ್ಲಿ, ಟ್ರಕ್ ತೀಕ್ಷ್ಣವಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ಕಡಿದಾದ ಇಳಿಜಾರಿನ ಕೆಳಗೆ ಜಾರಿದೆ ಎಂದು ಹೇಳಲಾಗಿದೆ.

ತಕ್ಷಣವೇ ಸೈನಿಕರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಗಾಯಗೊಂಡ ನಾಲ್ವರು ಸೈನಿಕರನ್ನು ಮೇಲಕ್ಕೆತ್ತಲಾಯಿತು. ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಭಾರತೀಯ ಸೇನೆಯ ಸಿಬ್ಬಂದಿಯು ಸಾವನ್ನಪಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ನಮ್ಮ ಸೈನಿಕರು ಸಾವನ್ನಪ್ಪಿರುವುದು  ನೋವಾಗಿದೆ. ಮೃತರಿಗೆ ಸಂತಾಪ ಸೂಚಿಸಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹೇಳಿದ್ದಾರೆ.   ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೈನಿಕರ ಬದ್ಧತೆಗೆ ದೇಶವೇ ಕೃತಜ್ಞವಾಗಿದೆ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಪಘಾತದ ಸ್ಥಳದಿಂದ ಎಲ್ಲಾ 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ಸೇನಾ ಸಿಬ್ಬಂದಿಗಳ ಸ್ಥಿತಿ ಇನ್ನೂ ತಿಳಿದಿಲ್ಲ ಎಂದು ಲಾಚೆನ್‌ನಿಂದ ಪೊಲೀಸ್ ತಂಡದೊಂದಿಗೆ ಸ್ಥಳದಲ್ಲಿದ್ದ ಚುಂಗ್‌ಥಾಂಗ್ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅರುಣ್ ಥಾಟಲ್ ಹೇಳಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್‌ಟಾಕ್‌ನ ಸರ್ಕಾರಿ ಎಸ್‌ಟಿಎನ್‌ಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಸೇನೆಗೆ ಹಸ್ತಾಂತರಿಸಲಾಗುವುದು. ಸಂತ್ರಸ್ತರ ರೆಜಿಮೆಂಟ್ ಇನ್ನೂ ಖಚಿತವಾಗಿಲ್ಲ.

Published On - 4:07 pm, Fri, 23 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ