AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Hooch Tragedy: ಬಿಹಾರದಲ್ಲಿ 16 ಜನರ ನಿಗೂಢ ಸಾವು; ದುರಂತದ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡದ ಶಂಕೆ

Bihar Hooch Tragedy: ಕಳೆದ 3 ದಿನಗಳೊಳಗೆ ಈ ಪ್ರದೇಶದ ಸುತ್ತಮುತ್ತಲೂ 16 ಜನರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Bihar Hooch Tragedy: ಬಿಹಾರದಲ್ಲಿ 16 ಜನರ ನಿಗೂಢ ಸಾವು; ದುರಂತದ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡದ ಶಂಕೆ
ಮದ್ಯಪಾನ
TV9 Web
| Edited By: |

Updated on:Jul 17, 2021 | 1:40 PM

Share

ಪಾಟ್ನಾ: ಬಿಹಾರ ರಾಜ್ಯದ ವೆಸ್ಟ್ ಚಂಪರನ್ ಎಂಬ ಊರಿನಲ್ಲಿ 16 ಜನರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳಭಟ್ಟಿ (Hooch) ಸೇವನೆ ಮಾಡಿದ ಪರಿಣಾಮದಿಂದ 16 ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ (spurious liquor) ಎನ್ನಲಾಗಿದೆ.

ಕಳೆದ 3 ದಿನಗಳೊಳಗೆ ಈ ಪ್ರದೇಶದ ಸುತ್ತಮುತ್ತಲೂ 16 ಜನರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಚಂಪರನ್ ಪ್ರದೇಶದಲ್ಲಿ ಕಳ್ಳಭಟ್ಟಿ ದಂಧೆ ಹೆಚ್ಚಾಗಿ ನಡೆಯುತ್ತಿರುವುದರಿಂದ ಕಳ್ಳಭಟ್ಟಿ ಸೇವಿಸಿ ಇವರೆಲ್ಲರೂ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಸಾವನ್ನಪ್ಪಿದ 16 ಜನರ ಪೈಕಿ ಆರೇಳು ಜನರಿಗೆ ಆಲ್ಕೋಹಾಲ್ ಸೇವಿಸುವ ಅಭ್ಯಾಸವಿರಲಿಲ್ಲ ಎಂದು ಅವರ ಮನೆಯವರು ಹೇಳಿದ್ದಾರೆ. ಇದರಿಂದ ಈ ನಿಗೂಢ ಸಾವಿನ ರಹಸ್ಯ ಇನ್ನಷ್ಟು ಕಗ್ಗಂಟಾಗಿದೆ.

ಈ ಬಗ್ಗೆ ವರದಿ ಮಾಡಿರುವ ಹಿಂದೂಸ್ತಾನ್ ಟೈಮ್ಸ್, ಮರಣೋತ್ತರ ಪರೀಕ್ಷೆಯಲ್ಲಾದರೂ ಈ 16 ಜನರ ಸಾವಿನ ಕಾರಣ ಬಯಲಾಗಲಿದೆ. ಜೋಗಿಯಾ, ಬಗಾಹಿ, ದೆವ್​ರವ ಎಂಬ ಊರುಗಳಲ್ಲಿನ 8 ಜನರು ಒಂದೇ ದಿನ ಸಾವನ್ನಪ್ಪಿದ್ದಾರೆ. ಇನ್ನು, ಈ ಸಾವಿನ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡವಿರುವ ಅನುಮಾನ ಹೊಗೆಯಾಡುತ್ತಿದ್ದಂತೆ ಈ ಸಾವಿನ ಪ್ರಕರಣ ರಾಜಕೀಯ ತಿರುವನ್ನೂ ಪಡೆದುಕೊಂಡಿದೆ ಎಂದು ವರದಿ ಮಾಡಿದೆ.

ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಲ್ಲಿ ಪ್ರತಿವರ್ಷ ಸಾವಿರಾರು ಜನರು ಕಳ್ಳಭಟ್ಟಿ ಮತ್ತು ವಿಷಪೂರಿತ ಸಾರಾಯಿ ಸೇವನೆಯಿಂದ ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಲೇ ಇದ್ದಾರೆ. ಇದೇನಾ ನಿಮ್ಮ ಆಡಳಿತ ವೈಖರಿ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರ ದಾಳಿ.. ಮುಂದೇನಾಯ್ತು?

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ: ಓರ್ವ ಪೈಲಟ್ ಸಾವು, ಮತ್ತೊಬ್ಬರಿಗೆ ಗಾಯ

(16 Dead in Bihar’s Champaran after consuming spurious liquor Suspicious Hooch Tragedy)

Published On - 1:14 pm, Sat, 17 July 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್