AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ ದೇವಾಲಯಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚನೆ

ಪೊಲೀಸರು ಒಟ್ಟು 20 ಕೇಸ್​ಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆಯು ವಿವಿಧ ಹಂತದಲ್ಲಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶ ದೇವಾಲಯಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚನೆ
ಸಂಗ್ರಹ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 10:54 PM

Share

ಹೈದರಾಬಾದ್: ದೇವಾಲಯದ ಮೇಲಿನ ದಾಳಿ ಹಾಗೂ ಮೂರ್ತಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ಆಂಧ್ರಪ್ರದೇಶ ಸರ್ಕಾರ ರಚಿಸಿದೆ. ತನಿಖಾ ತಂಡವು 16 ಸದಸ್ಯರನ್ನು ಹೊಂದಿದೆ.

ಭ್ರಷ್ಟಾಚಾರ ವಿರೋಧಿ ಪಡೆಯ ಹೆಚ್ಚುವರಿ ನಿರ್ದೇಶಕ ಜಿ.ವಿ.ಜಿ. ಅಶೋಕ್ ಕುಮಾರ್​ಗೆ ತಂಡದ ಮುಂದಾಳತ್ವ ನೀಡಲಾಗಿದೆ. ಕೃಷ್ಣಾ ಎಸ್​ಪಿ ಎಮ್. ರವೀಂದ್ರನಾಥ್ ಬಾಬು ಹಾಗೂ ಇಬ್ಬರು ಹೆಚ್ಚುವರಿ ಎಸ್​ಪಿಗಳು ಪ್ರಕರಣದ ತನಿಖೆಯನ್ನು ನಡೆಸಲಿದ್ದಾರೆ. ಜೊತೆಗೆ, ರಾಜ್ಯದ ಇಬ್ಬರು ಡಿಎಸ್​ಪಿಗಳು, ಇಬ್ಬರು ಸಹಾಯಕ ಕಮಿಷನರ್​ಗಳು, ನಾಲ್ಕು ಸರ್ಕಲ್ ಇನ್​ಸ್ಪೆಕ್ಟರ್​ಗಳು ಹಾಗೂ ನಾಲ್ಕು ಸಬ್ ಇನ್ಸ್​ಪೆಕ್ಟರ್​ಗಳು ತಂಡದಲ್ಲಿ ಇರಲಿದ್ದಾರೆ.

ಪೊಲೀಸರು ಈ ಸಂಬಂಧ ಒಟ್ಟು 20 ಕೇಸ್​ಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆಯು ವಿವಿಧ ಹಂತದಲ್ಲಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ, ಕ್ರೈಂ ತನಿಖಾ ವಿಭಾಗ ಹಾಗೂ ಇತರ ವಿಭಾಗಗಳು ವಿಶೇಷ ತನಿಖಾ ತಂಡದ ತನಿಖೆಗೆ ಬೆಂಬಲ ನೀಡಲಿವೆ. ತನಿಖೆಯ ವಿವರಗಳನ್ನು ಅಧಿಕಾರಿಗಳು, ಪೊಲೀಸ್ ಮಹಾನಿರ್ದೇಶಕ ಡಿ. ಗೌತಮ್ ಸಾವಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರವಿ ಶಂಕರ್ ಅಯ್ಯನಾರ್​ಗೆ ಸಲ್ಲಿಸಲಿದ್ದಾರೆ.

ರಾಜ್ಯದ ಪಶ್ಚಿಮ ಗೋದಾವರಿ, ಕೃಷ್ಣಾ, ವಿಜಯನಗರಂ, ಪೂರ್ವ ಗೋದಾವರಿ, ಪ್ರಕಾಶಂ ಹಾಗೂ ಇತರ ಜಿಲ್ಲೆಗಳಲ್ಲಿ, ದೇವಾಲಯಗಳ ಮೇಲೆ ದಾಳಿಯಾದ ಬಗ್ಗೆ ಸುಮಾರು 25 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ವಿಶೇಷ ತಂಡ (SIT) ತನಿಖೆ ನಡೆಸಲಿವೆ.

ಧ್ವಂಸಗೊಂಡಿರುವ ಹಿಂದೂ ದೇವಾಲಯವನ್ನು 2 ವಾರಗಳಲ್ಲಿ ಪುನಃಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಆದೇಶ

Published On - 7:07 pm, Sat, 9 January 21

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ