AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಿಂದ ನಿನ್ನೆ ಬಂದ 16 ಜನರಿಗೆ ಕೊರೊನಾ ಸೋಂಕು; ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿಗೂ ಆತಂಕ

ಮಂಗಳವಾರ ಬಂದ 78 ಜನರಲ್ಲಿ 46ಮಂದಿ ಅಫ್ಘಾನ್​ ಸಿಖ್​ ಹಾಗೂ ಹಿಂದು ಸಮುದಾಯದವರು ಇದ್ದಾರೆ. ಇವರೆಲ್ಲ ಕಾಬೂಲ್​ನಿಂದ ದುಶಾಂಬೆ ಮಾರ್ಗವಾಗಿ, ಏರ್​ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಬಂದಿಳಿದಿದ್ದಾರೆ.

ಅಫ್ಘಾನಿಸ್ತಾನದಿಂದ ನಿನ್ನೆ ಬಂದ 16 ಜನರಿಗೆ ಕೊರೊನಾ ಸೋಂಕು; ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿಗೂ ಆತಂಕ
ಕಾಬೂಲ್​​ನಿಂದ ಬಂದ ಪ್ರಯಾಣಿಕರು
TV9 Web
| Edited By: |

Updated on:Aug 25, 2021 | 10:09 AM

Share

ಉಗ್ರರ ಕೈವಶದಲ್ಲಿರುವ ಅಫ್ಘಾನಿಸ್ತಾನ (Afghanistan) ಜನರನ್ನು ಭಾರತಕ್ಕೆ ಕರೆತರುವ ‘ಆಪರೇಶನ್​ ದೇವಿ ಶಕ್ತಿ’ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ಈ ಮಧ್ಯೆ ಕೊರೊನಾ ಸೋಂಕಿ (Coronavirus)ನ ಆತಂಕ ಕೂಡ ಹೆಚ್ಚಾಗುತ್ತಿದೆ. ಮಂಗಳವಾರ ಕಾಬೂಲ್​ (Kabul)ನಿಂದ ಬಂದ 78 ಜನರಲ್ಲಿ 16 ಮಂದಿಗೆ ಕೊವಿಡ್​ 19 ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲೀಗ ಅಫ್ಘಾನಿಸ್ತಾನದ ಗುರುದ್ವಾರಗಳಿಂದ ಗುರು ಗ್ರಂಥ ಸಾಹೀಬ್​​ ಪವಿತ್ರ ಗ್ರಂಥ ತಂದ ಮೂವರಲ್ಲೂ ಸಹ ಕೊರೊನಾ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿಯವರಿಗೂ ಸೋಂಕಿನ ಆತಂಕ ಶುರುವಾಗಿದೆ.  ಯಾಕೆಂದರೆ ನಿನ್ನೆ ಈ ಮೂವರು ತಂದಿದ್ದ ಗುರು ಗ್ರಂಥ ಸಾಹೀಬ್​ ಸ್ವರೂಪ್​​ನ್ನು ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ, ವಿ ಮುರಳೀಧರನ್ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್. ಪಿ. ಸಿಂಗ್ ಸ್ವೀಕರಿಸಿದ್ದರು. 

ಮಂಗಳವಾರ ಬಂದ 78 ಜನರಲ್ಲಿ 46ಮಂದಿ ಅಫ್ಘಾನ್​ ಸಿಖ್​ ಹಾಗೂ ಹಿಂದು ಸಮುದಾಯದವರು ಇದ್ದಾರೆ. ಇವರೆಲ್ಲ ಕಾಬೂಲ್​ನಿಂದ ದುಶಾಂಬೆ ಮಾರ್ಗವಾಗಿ, ಏರ್​ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಬಂದಿಳಿದಿದ್ದಾರೆ. ಅದರಲ್ಲಿ ಮೂವರು ಸಿಖ್​ರು ತಂದಿದ್ದ ಪವಿತ್ರ ಪುಸ್ತಕದ ಪ್ರತಿಯನ್ನು ದೆಹಲಿ ಇಂದಿರಾ ಗಾಂಧಿ ಏರ್​ಪೋರ್ಟ್​ನಲ್ಲಿ ಹರ್ದೀಪ್​ ಸಿಂಗ್​ ಪುರಿ, ವಿ.ಮುರಳೀಧರನ್​ ಮತ್ತು ಆರ್​.ಪಿ.ಸಿಂಗ್​ ಸ್ವೀಕರಿಸಿದ್ದಾರೆ. ನಂತರ ಅದನ್ನು ನ್ಯೂ ಮಹಾವೀರ್ ನಗರದಲ್ಲಿರುವ ಗುರು ಅರ್ಜನ್​ ದೇವ್​ ಜಿ ಗುರುದ್ವಾರಕ್ಕೆ ಕೊಂಡೊಯ್ಯಲಾಗಿದೆ. ಇದೀಗ ಆ ಮೂವರಲ್ಲೂ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಬಿಜೆಪಿ ನಾಯಕರಿಗೂ ಕೊರೊನಾ ಆತಂಕ ಶುರುವಾಗಿದೆ.

ತಾಲಿಬಾನ್​​ನಿಂದ ಎಚ್ಚರಿಕೆ ಈ ಮಧ್ಯೆ ತಾಲಿಬಾನ್​ ಯುಎಸ್​ಗೆ ಒಂದು ಖಡಕ್​ ಎಚ್ಚರಿಕೆ ನೀಡಿದೆ. ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರ ಮಾಡುವ ಕಾರ್ಯವನ್ನು ಆಗಸ್ಟ್​ 31ರೊಳಗೆ ಮುಗಿಸಬೇಕು ಎಂದು ಹೇಳಿದೆ. ಅದಕ್ಕೆ ಪ್ರತಿಯಾಗಿ ಜೋ ಬೈಡನ್​ ಕೂಡ, ತಾವು ಆಗಸ್ಟ್​ 31ರೊಳಗೆ ಸ್ಥಳಾಂತರ ಕಾರ್ಯ  ಪೂರ್ಣಗೊಳಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಈಗ ಭದ್ರತಾ ಸವಾಲುಗಳೊಂದಿಗೆ ಕೊರೊನಾ ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ನಿಲ್ಲಿಸಿದ ವಿಶ್ವಬ್ಯಾಂಕ್​; ತಾಲಿಬಾನಿಗಳಿಗೆ ಆರ್ಥಿಕ ದಿಗ್ಬಂಧನ

Viral Video: ಮದುವೆ ಮಂಟಪದಲ್ಲಿಯೇ ಟಗ್ ಆಫ್ ವಾರ್ ಸ್ಪರ್ಧೆ; ಜಾರಿ ಬಿದ್ದ ಮಹಿಳೆಯನ್ನು ವಿಡಿಯೋದಲ್ಲೇ ನೋಡಿ

Published On - 9:58 am, Wed, 25 August 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ