AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ವೃದ್ಧ ಅಜ್ಜ-ಅಜ್ಜಿಯನ್ನು ಬೆಂಕಿ ಹಚ್ಚಿ ಕೊಂದ 16 ವರ್ಷದ ಹುಡುಗ; ಕಾರಣ ನಿಜಕ್ಕೂ ಶಾಕಿಂಗ್​

16ವರ್ಷದ ಬಾಲಕ ತಾನೇ ಈ ಅಪರಾಧ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಗಿ ಪೊಲೀಸರ ಎದುರು ಹೇಳಿಕೊಂಡಿದ್ದಾನೆ. ನಾನು ನನ್ನ ತಪ್ಪ-ಅಮ್ಮನೊಂದಿಗೇ ಇರುತ್ತೇನೆ. ಆದರೆ ಅಜ್ಜ-ಅಜ್ಜಿಯನ್ನು ಕೊಲ್ಲಲೆಂದೇ ಅವರ ಮನೆಗೆ ಹೋಗಿದ್ದೆ ಎಂದಿದ್ದಾನೆ.

Tamil Nadu: ವೃದ್ಧ ಅಜ್ಜ-ಅಜ್ಜಿಯನ್ನು ಬೆಂಕಿ ಹಚ್ಚಿ ಕೊಂದ 16 ವರ್ಷದ ಹುಡುಗ; ಕಾರಣ ನಿಜಕ್ಕೂ ಶಾಕಿಂಗ್​
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Sep 16, 2021 | 7:12 PM

Share

16 ವರ್ಷದ ಮೊಮ್ಮಗನೊಬ್ಬ ತನ್ನ ಅಜ್ಜ-ಅಜ್ಜಿ ಇಬ್ಬರನ್ನೂ ಬೆಂಕಿ ಹಚ್ಚಿ ಕೊಂದ ದುರ್ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಅಜ್ಜ-ಅಜ್ಜಿ ತನ್ನನ್ನು ಸದಾ ಹಂಗಿಸುತ್ತಿದ್ದರು. ನನ್ನ ಕಸಿನ್​​ ಜತೆ ಹೋಲಿಸಿ ಮಾತನಾಡುತ್ತಿದ್ದರು. ಹೀಗಾಗಿ ಕೋಪಗೊಂಡು ಕೊಂದಿದ್ದಾಗಿ ಆ ಬಾಲಕ ಹೇಳಿದ್ದಾನೆ. ಇದು ಪೊಲೀಸರಿಗೂ ಶಾಕ್​ ಮೂಡಿಸಿದೆ. ಕಾಟು ರಾಜಾ (70) ಮತ್ತು ಕಾಶಿಯಾಮ್ಮಳ್​​ (60) ಮೃತ ವೃದ್ಧ ದಂಪತಿ. ಸೋಮವಾರವೇ ಘಟನೆ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ. 

ಸೋಮವಾರ ಮುಂಜಾನೆ ಇವರ ಮನೆಯಿಂದ ಜೋರಾಗಿ ಕಿರುಚಾಟ ಕೇಳಿಬರುತ್ತಿತ್ತು. ಹೋಗಿ ನೋಡಿದರೆ ಮನೆ ಲಾಕ್​ ಆಗಿತ್ತು. ಮತ್ತು ಬೆಂಕಿಯಿಂದ ಹೊತ್ತಿ ಉರಿಯುತ್ತಿತ್ತು. ಮನೆಯ ಬೀಗ ಒಡೆದು, ವೃದ್ಧ ದಂಪತಿಯನ್ನು ರಕ್ಷಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದರೂ ಅವರು ಬರುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು. ಅಗ್ನಿಶಾಮಕ ದಳ, ಪೊಲೀಸರು ಬಂದು, ಅವರನ್ನು ರಕ್ಷಿಸಲೇನೋ ಪ್ರಯತ್ನ ಪಟ್ಟರು. ಆದರೆ ಅಷ್ಟರಲ್ಲಾಗಲೇ ಗಂಭೀರ ಸುಟ್ಟಗಾಯಗಳಿಂದ ದಂಪತಿ ಜೀವ ಬಿಟ್ಟಿದ್ದರು ಎಂದು ವರದಿಯಾಗಿದೆ.

16ವರ್ಷದ ಬಾಲಕ ತಾನೇ ಈ ಅಪರಾಧ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಗಿ ಪೊಲೀಸರ ಎದುರು ಹೇಳಿಕೊಂಡಿದ್ದಾನೆ. ‘ನಾನು ನನ್ನ ತಪ್ಪ-ಅಮ್ಮನೊಂದಿಗೇ ಇರುತ್ತೇನೆ. ಆದರೆ ಅಜ್ಜ-ಅಜ್ಜಿಯನ್ನು ಕೊಲ್ಲಲೆಂದೇ ಅವರ ಮನೆಗೆ ಹೋಗಿದ್ದೆ. ನಾನು ಸಮಯ ಹಾಳುಮಾಡುತ್ತೇನೆ..ಏನೂ ಕೆಲಸ ಮಾಡುವುದಿಲ್ಲ..ಸರಿಯಾಗಿ ಓದುವುದಿಲ್ಲ ಎಂದು ಅಜ್ಜ-ಅಜ್ಜಿ ಸದಾ ಹಂಗಿಸುತ್ತಿದ್ದರು. ಅಷ್ಟೇ ಅಲ್ಲ, ನನ್ನನ್ನು ಯಾವಾಗಲೂ ಚಿಕ್ಕಪ್ಪ ಮತ್ತು ಅವರ ಮಕ್ಕಳೊಂದಿಗೆ ಹೋಲಿಸಿ ಮಾತನಾಡುತ್ತಿದ್ದರು. ಅವರನ್ನು ಹೊಗಳುತ್ತಿದ್ದರು, ನನ್ನನ್ನು ತೆಗೆಳುತ್ತಿದ್ದರು. ಇದೇ ಕಾರಣಕ್ಕೆ ಬೇಸತ್ತು ಅವರಿಗೆ ಬೆಂಕಿ ಹಾಕಿದ್ದೇನೆ’ ಎಂದು ಬಾಲಕ ಹೇಳಿಕೆ ಕೊಟ್ಟಿದ್ದಾಗಿ ಅಟ್ಟೂರ್​ ಡಿಎಸ್​ಪಿ ಇಮ್ಯಾನ್ಯುಯೆಲ್​ ಜ್ಞಾನಶೇಖರ್ ತಿಳಿಸಿದ್ದಾರೆ.  ಸದ್ಯ ಬಾಲಕನ ವಿರುದ್ಧ ಐಪಿಸಿ 302ರಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Shah Rukh Khan: ಶಾರುಖ್ ಹೊಸ ಸಿನಿಮಾ ಟೈಟಲ್ ಲೀಕ್; ಸಲ್ಲು ‘ಟೈಗರ್’, ಕಿಂಗ್ ಖಾನ್ ‘ಲಯನ್’!

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!