AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಹಬ್ಬ ಆಚರಣೆ ವೇಳೆ ವಿದ್ಯುತ್ ಸ್ಪರ್ಶಿಸಿ 17 ಮಕ್ಕಳ ಸ್ಥಿತಿ ಚಿಂತಾಜನಕ

ಶಿವರಾತ್ರಿ ಹಬ್ಬ ಆಚರಣೆ ವೇಳೆ ಹದಿನೇಳು ಮಕ್ಕಳು ಮತ್ತು ಮಹಿಳೆಯೊಬ್ಬರಿಗೆ ವಿದ್ಯುತ್ ಸ್ಪರ್ಶಿ ಸುಟ್ಟಗಾಯಗಳಿವೆ. ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಳಿ ಬಸ್ತಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಶಿವರಾತ್ರಿ ಹಬ್ಬ ಆಚರಣೆ ವೇಳೆ ವಿದ್ಯುತ್ ಸ್ಪರ್ಶಿಸಿ 17 ಮಕ್ಕಳ ಸ್ಥಿತಿ ಚಿಂತಾಜನಕ
ಅಕ್ಷಯ್​ ಪಲ್ಲಮಜಲು​​
|

Updated on: Mar 08, 2024 | 6:17 PM

Share

ಕೋಟಾ, ಮಾ.8: ರಾಜಸ್ಥಾನದ ಕೋಟಾದಲ್ಲಿ ಇಂದು ಶಿವರಾತ್ರಿ ಹಬ್ಬ ಆಚರಣೆ ವೇಳೆ ಹದಿನೇಳು ಮಕ್ಕಳು ಮತ್ತು ಮಹಿಳೆಯೊಬ್ಬರಿಗೆ ವಿದ್ಯುತ್ ಸ್ಪರ್ಶಿ ಸುಟ್ಟಗಾಯಗಳಿವೆ. ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಳಿ ಬಸ್ತಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ಕುಂಹಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಅರವಿಂದ ಭಾರಧ್ವಾಜ್ ಅವರು ಮಾಹಿತಿ ನೀಡಿದ್ದಾರೆ, ಅವರರ ಪ್ರಕಾರ, ಮಕ್ಕಳ ತಂಡವು ಮೆರವಣಿಗೆಯ ಭಾಗವಾಗಿತ್ತು ಮತ್ತು ಒಂದು ದೇವಸ್ಥಾನದಿಂದ ಇನ್ನೊಂದು ದೇವಸ್ಥಾನಕ್ಕೆ ಕಲಶವನ್ನು (ಪಾತ್ರೆ) ಹೊತ್ತುಕೊಂಡು ಹೋಗುತ್ತಿದ್ದರು. ಇನ್ನೊಂದು ಕಡೆ ಮಕ್ಕಳು ಕಬ್ಬಿಣದ ರಾಡ್‌ನಲ್ಲಿ ಧ್ವಜವನ್ನು ಹಾರಿಸಿದ್ದರು. ಈ ಸಮಯದಲ್ಲಿ ರಾಡ್ ಮೇಲೆ ಇದ್ದ ಹೈಟೆನ್ಷನ್ ತಂತಿಗೆ ತಗುಲಿ ಮಹಿಳೆಯೊಂದಿಗೆ ಮಕ್ಕಳಿಗೂ ವಿದ್ಯತ್​​ ಸ್ಪರ್ಶಿಸಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಕ್ಕಳ ಪೈಕಿ ಒಬ್ಬರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಜನರಿಗೆ ಒದ್ದ ದೆಹಲಿ ಪೊಲೀಸ್; ಅಧಿಕಾರಿ ಅಮಾನತು

ಇನ್ನು ಗಾಯಗೊಂಡಿರುವವನ್ನು ಕೋಟಾದ ಎಂಬಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಮಕ್ಕಳು 9 ರಿಂದ 16 ವರ್ಷದೊಳಗಿನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಜಿಲ್ಲಾಧಿಕಾರಿ ರವೀಂದ್ರ ಗೋಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರ ಜತೆಗೆ ರಾಜಸ್ಥಾನದ ಇಂಧನ ಸಚಿವ ಹೀರಾಲಾಲ್ ನಗರ್ ಕೂಡ ಭೇಟಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ