AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ 17 ಚಾರಣಿಗರು ನಾಪತ್ತೆ

Himachal Pradesh ಚಾರಣಿಗರು ಅಕ್ಟೋಬರ್ 14 ರಂದು ಉತ್ತರಾಖಂಡದ ಉತ್ತರಕಾಶಿಯ ಹರ್ಷಿಲ್​ನಿಂದ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಚಿತ್ಕುಲ್‌ಗೆ ಹೊರಟಿದ್ದರು. ಆದರೆ ಅವರು ಅಕ್ಟೋಬರ್ 17 ರಿಂದ 19 ರವರೆಗೆ ಲಮಖಾಗಾ ಪಾಸ್‌ನಲ್ಲಿ ಕಾಣೆಯಾದರು.

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ 17 ಚಾರಣಿಗರು ನಾಪತ್ತೆ
ಕಿನ್ನೌರ್ ಜಿಲ್ಲೆಯ ಎನ್ಎಚ್ -5
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 21, 2021 | 2:16 PM

Share

ಕಿನ್ನೌರ್: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ 17 ಮಂದಿ ಚಾರಣಿಗರು ನಾಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಚಾರಣಿಗರು ಅಕ್ಟೋಬರ್ 14 ರಂದು ಉತ್ತರಾಖಂಡದ ಉತ್ತರಕಾಶಿಯ ಹರ್ಷಿಲ್​ನಿಂದ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಚಿತ್ಕುಲ್‌ಗೆ ಹೊರಟಿದ್ದರು. ಆದರೆ ಅವರು ಅಕ್ಟೋಬರ್ 17 ರಿಂದ 19 ರವರೆಗೆ ಲಮಖಾಗಾ ಪಾಸ್‌ನಲ್ಲಿ ಕಾಣೆಯಾದರು ಎಂದು ಅಧಿಕಾರಿ ಹೇಳಿದ್ದಾರೆ.  ಲಮಖಾಗಾ ಪಾಸ್ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಷಿಲ್‌ನೊಂದಿಗೆ ಸಂಪರ್ಕಿಸುವ ಕಠಿಣ ಪಾಸ್‌ಗಳಲ್ಲಿ ಒಂದಾಗಿದೆ.  ಪೊಲೀಸ್, ಅರಣ್ಯ ಇಲಾಖೆ ತಂಡಗಳು ಮತ್ತು ತ್ವರಿತ ಪ್ರತಿಕ್ರಿಯೆ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ತಿಳಿಸಿದ್ದಾರೆ. ಅವರ ಶೋಧಕ್ಕಾಗಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರ ಸಹಾಯವನ್ನೂ ಕೋರಲಾಗಿದೆ ಎಂದು ಡಿಸಿ ಹೇಳಿದ್ದಾರೆ.

ಗುರುವಾರ ಮುಂಜಾನೆ ಶೋಧ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಉತ್ತರಾಖಂಡದಲ್ಲಿ ಕಾಣೆಯಾದ 3 ಪೋರ್ಟರ್​ಗಳು ಶವವಾಗಿ ಪತ್ತೆ ಭಾರತ-ಚೀನಾ ಗಡಿಯಲ್ಲಿ ಐಟಿಬಿಪಿ ತಂಡದೊಂದಿಗೆ ಗಸ್ತು ತಿರುಗುತ್ತಿದ್ದಾಗ ನಾಪತ್ತೆಯಾಗಿದ್ದ ಮೂವರು ಪೋರ್ಟರ್​​ಗಳು ಬುಧವಾರ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಸ್ತು ತಿರುಗುತ್ತಿದ್ದಾಗ ಪೋರ್ಟರ್ ಗಳು ದಾರಿ ತಪ್ಪಿ ಐಟಿಬಿಪಿ ತಂಡದಿಂದ ಬೇರ್ಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ತಿಳಿಸಿದ್ದಾರೆ.

ಅವರು ಸೋಮವಾರ ನೀಲಪಾಣಿಯ ಐಟಿಬಿಪಿ ಪೋಸ್ಟ್ ತಲುಪಬೇಕಿತ್ತು ಆದರೆ ಪರ್ವತ ಶಿಖರಗಳಲ್ಲಿ ಹಿಮಪಾತವಾಗಿದ್ದರಿಂದ, ಅವರು ಮಂಗಳವಾರ ಸಂಜೆಯಾದರೂ ಹಿಂತಿರುಗಲಿಲ್ಲ. ಆದ್ದರಿಂದ ಅವರನ್ನು ಪತ್ತೆಹಚ್ಚಲು ಭಾರತೀಯ ವಾಯುಪಡೆ (ಐಎಎಫ್) ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಸಹಾಯ ಪಡೆಯಿತು ಎಂದು ಅಧಿಕಾರಿ ಹೇಳಿದರು.

ಐಟಿಬಿಪಿ ಮಟ್ಲಿ 12 ಬೆಟಾಲಿಯನ್ ಕಮಾಂಡೆಂಟ್ ಅಭಿಜಿತ್ ಸಮಯಾರ್ ಅವರು ಪೋರ್ಟರ್ ಗಳ ಸಾವನ್ನು ದೃಢಪಡಿಸಿದ್ದು ಅವರನ್ನು ಹಿಮದ ಕೆಳಗೆ ಹೂಳಲಾಗಿದೆ ಎಂದು ಹೇಳಿದರು.  ಅವರ ಶವಗಳನ್ನು ಹೊರತೆಗೆಯಲು ಮತ್ತು ಮಟ್ಲಿಯಲ್ಲಿ ಕಾಯುತ್ತಿರುವ ಅವರ ಸಂಬಂಧಿಕರಿಗೆ ಹಸ್ತಾಂತರಿಸಲು ಗುರುವಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಆದರೆ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ