AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ 17 ಚಾರಣಿಗರು ನಾಪತ್ತೆ

Himachal Pradesh ಚಾರಣಿಗರು ಅಕ್ಟೋಬರ್ 14 ರಂದು ಉತ್ತರಾಖಂಡದ ಉತ್ತರಕಾಶಿಯ ಹರ್ಷಿಲ್​ನಿಂದ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಚಿತ್ಕುಲ್‌ಗೆ ಹೊರಟಿದ್ದರು. ಆದರೆ ಅವರು ಅಕ್ಟೋಬರ್ 17 ರಿಂದ 19 ರವರೆಗೆ ಲಮಖಾಗಾ ಪಾಸ್‌ನಲ್ಲಿ ಕಾಣೆಯಾದರು.

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ 17 ಚಾರಣಿಗರು ನಾಪತ್ತೆ
ಕಿನ್ನೌರ್ ಜಿಲ್ಲೆಯ ಎನ್ಎಚ್ -5
TV9 Web
| Edited By: |

Updated on: Oct 21, 2021 | 2:16 PM

Share

ಕಿನ್ನೌರ್: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ 17 ಮಂದಿ ಚಾರಣಿಗರು ನಾಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಚಾರಣಿಗರು ಅಕ್ಟೋಬರ್ 14 ರಂದು ಉತ್ತರಾಖಂಡದ ಉತ್ತರಕಾಶಿಯ ಹರ್ಷಿಲ್​ನಿಂದ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಚಿತ್ಕುಲ್‌ಗೆ ಹೊರಟಿದ್ದರು. ಆದರೆ ಅವರು ಅಕ್ಟೋಬರ್ 17 ರಿಂದ 19 ರವರೆಗೆ ಲಮಖಾಗಾ ಪಾಸ್‌ನಲ್ಲಿ ಕಾಣೆಯಾದರು ಎಂದು ಅಧಿಕಾರಿ ಹೇಳಿದ್ದಾರೆ.  ಲಮಖಾಗಾ ಪಾಸ್ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಷಿಲ್‌ನೊಂದಿಗೆ ಸಂಪರ್ಕಿಸುವ ಕಠಿಣ ಪಾಸ್‌ಗಳಲ್ಲಿ ಒಂದಾಗಿದೆ.  ಪೊಲೀಸ್, ಅರಣ್ಯ ಇಲಾಖೆ ತಂಡಗಳು ಮತ್ತು ತ್ವರಿತ ಪ್ರತಿಕ್ರಿಯೆ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ತಿಳಿಸಿದ್ದಾರೆ. ಅವರ ಶೋಧಕ್ಕಾಗಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರ ಸಹಾಯವನ್ನೂ ಕೋರಲಾಗಿದೆ ಎಂದು ಡಿಸಿ ಹೇಳಿದ್ದಾರೆ.

ಗುರುವಾರ ಮುಂಜಾನೆ ಶೋಧ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಉತ್ತರಾಖಂಡದಲ್ಲಿ ಕಾಣೆಯಾದ 3 ಪೋರ್ಟರ್​ಗಳು ಶವವಾಗಿ ಪತ್ತೆ ಭಾರತ-ಚೀನಾ ಗಡಿಯಲ್ಲಿ ಐಟಿಬಿಪಿ ತಂಡದೊಂದಿಗೆ ಗಸ್ತು ತಿರುಗುತ್ತಿದ್ದಾಗ ನಾಪತ್ತೆಯಾಗಿದ್ದ ಮೂವರು ಪೋರ್ಟರ್​​ಗಳು ಬುಧವಾರ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಸ್ತು ತಿರುಗುತ್ತಿದ್ದಾಗ ಪೋರ್ಟರ್ ಗಳು ದಾರಿ ತಪ್ಪಿ ಐಟಿಬಿಪಿ ತಂಡದಿಂದ ಬೇರ್ಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ತಿಳಿಸಿದ್ದಾರೆ.

ಅವರು ಸೋಮವಾರ ನೀಲಪಾಣಿಯ ಐಟಿಬಿಪಿ ಪೋಸ್ಟ್ ತಲುಪಬೇಕಿತ್ತು ಆದರೆ ಪರ್ವತ ಶಿಖರಗಳಲ್ಲಿ ಹಿಮಪಾತವಾಗಿದ್ದರಿಂದ, ಅವರು ಮಂಗಳವಾರ ಸಂಜೆಯಾದರೂ ಹಿಂತಿರುಗಲಿಲ್ಲ. ಆದ್ದರಿಂದ ಅವರನ್ನು ಪತ್ತೆಹಚ್ಚಲು ಭಾರತೀಯ ವಾಯುಪಡೆ (ಐಎಎಫ್) ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಸಹಾಯ ಪಡೆಯಿತು ಎಂದು ಅಧಿಕಾರಿ ಹೇಳಿದರು.

ಐಟಿಬಿಪಿ ಮಟ್ಲಿ 12 ಬೆಟಾಲಿಯನ್ ಕಮಾಂಡೆಂಟ್ ಅಭಿಜಿತ್ ಸಮಯಾರ್ ಅವರು ಪೋರ್ಟರ್ ಗಳ ಸಾವನ್ನು ದೃಢಪಡಿಸಿದ್ದು ಅವರನ್ನು ಹಿಮದ ಕೆಳಗೆ ಹೂಳಲಾಗಿದೆ ಎಂದು ಹೇಳಿದರು.  ಅವರ ಶವಗಳನ್ನು ಹೊರತೆಗೆಯಲು ಮತ್ತು ಮಟ್ಲಿಯಲ್ಲಿ ಕಾಯುತ್ತಿರುವ ಅವರ ಸಂಬಂಧಿಕರಿಗೆ ಹಸ್ತಾಂತರಿಸಲು ಗುರುವಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಆದರೆ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ