AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ. ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ […]

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!
ಆಯೇಷಾ ಬಾನು
|

Updated on: Nov 16, 2020 | 1:22 PM

Share

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ.

ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸದತ್ ಈ ರೀತಿಯ ಅಪರಾಧ ಕೃತ್ಯಗಳನ್ನು ತಡೆಯಲೇಬೇಕು ಎಂದು ನಿರ್ಧರಿಸಿ ಸೈಬರ್ ಟೀನ್ಸ್ ಹೆಸರಿನ ಆ್ಯಪ್ ನಿರ್ಮಿಸಿದ್ದ.

ಸೈಬರ್ ಟೀನ್ಸ್ ಆ್ಯಪ್ 300ಕ್ಕೂ ಅಧಿಕ ಮಕ್ಕಳನ್ನು ಸೈಬರ್ ನಿಂದನೆಯಿಂದ ಬಚಾವು ಮಾಡಿದ್ದು ಎಂಟು ಜನ ತಪ್ಪಿತಸ್ಥರನ್ನು ಪತ್ತೆ ಹಚ್ಚುವಲ್ಲಿಯೂ ಸಹಕಾರಿಯಾಗಿದೆ. ಇದುವರೆಗೂ ಸುಮಾರು 45,000ಕ್ಕೂ ಹೆಚ್ಚು ಜನರನ್ನು ಸೈಬರ್ ಟೀನ್ಸ್ ಯಶಸ್ವಿಯಾಗಿ ತಲುಪಿದೆ. ಜಾಗತಿಕ ಮಟ್ಟದಲ್ಲಿ ಇದೊಂದು ಮಹತ್ವಪೂರ್ಣ ಕೆಲಸವಾಗಿದ್ದು ಆತನ ಈ ಸಾಧನೆಯನ್ನು ಪ್ರಶಂಸಿಸಿ 2020ನೇ ಸಾಲಿನ ಅಂತರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ನೊಬೆಲ್ ಪುರಸ್ಕೃತೆ ಯೂಸಫ್ ಮಲಾಲಾ ಪ್ರಶಸ್ತಿ ಘೋಷಣೆ ಮಾಡಿದ್ದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದತ್ ರೆಹಮಾನ್, ಸೈಬರ್ ಕ್ರೈಂ ಸಂಪೂರ್ಣ ನಿಂತು ಸೈಬರ್ ಟೀನ್ಸ್ ಆ್ಯಪ್ ಅವಶ್ಯಕತೆ ಇಲ್ಲ ಎಂದಾದಾಗಲೇ ನನ್ನ ನಿಜವಾದ ಗೆಲುವು ಎಂದಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?