AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ. ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ […]

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!
ಆಯೇಷಾ ಬಾನು
|

Updated on: Nov 16, 2020 | 1:22 PM

Share

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ.

ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸದತ್ ಈ ರೀತಿಯ ಅಪರಾಧ ಕೃತ್ಯಗಳನ್ನು ತಡೆಯಲೇಬೇಕು ಎಂದು ನಿರ್ಧರಿಸಿ ಸೈಬರ್ ಟೀನ್ಸ್ ಹೆಸರಿನ ಆ್ಯಪ್ ನಿರ್ಮಿಸಿದ್ದ.

ಸೈಬರ್ ಟೀನ್ಸ್ ಆ್ಯಪ್ 300ಕ್ಕೂ ಅಧಿಕ ಮಕ್ಕಳನ್ನು ಸೈಬರ್ ನಿಂದನೆಯಿಂದ ಬಚಾವು ಮಾಡಿದ್ದು ಎಂಟು ಜನ ತಪ್ಪಿತಸ್ಥರನ್ನು ಪತ್ತೆ ಹಚ್ಚುವಲ್ಲಿಯೂ ಸಹಕಾರಿಯಾಗಿದೆ. ಇದುವರೆಗೂ ಸುಮಾರು 45,000ಕ್ಕೂ ಹೆಚ್ಚು ಜನರನ್ನು ಸೈಬರ್ ಟೀನ್ಸ್ ಯಶಸ್ವಿಯಾಗಿ ತಲುಪಿದೆ. ಜಾಗತಿಕ ಮಟ್ಟದಲ್ಲಿ ಇದೊಂದು ಮಹತ್ವಪೂರ್ಣ ಕೆಲಸವಾಗಿದ್ದು ಆತನ ಈ ಸಾಧನೆಯನ್ನು ಪ್ರಶಂಸಿಸಿ 2020ನೇ ಸಾಲಿನ ಅಂತರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ನೊಬೆಲ್ ಪುರಸ್ಕೃತೆ ಯೂಸಫ್ ಮಲಾಲಾ ಪ್ರಶಸ್ತಿ ಘೋಷಣೆ ಮಾಡಿದ್ದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದತ್ ರೆಹಮಾನ್, ಸೈಬರ್ ಕ್ರೈಂ ಸಂಪೂರ್ಣ ನಿಂತು ಸೈಬರ್ ಟೀನ್ಸ್ ಆ್ಯಪ್ ಅವಶ್ಯಕತೆ ಇಲ್ಲ ಎಂದಾದಾಗಲೇ ನನ್ನ ನಿಜವಾದ ಗೆಲುವು ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ