AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ. ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ […]

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!
Follow us
ಆಯೇಷಾ ಬಾನು
|

Updated on: Nov 16, 2020 | 1:22 PM

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ.

ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸದತ್ ಈ ರೀತಿಯ ಅಪರಾಧ ಕೃತ್ಯಗಳನ್ನು ತಡೆಯಲೇಬೇಕು ಎಂದು ನಿರ್ಧರಿಸಿ ಸೈಬರ್ ಟೀನ್ಸ್ ಹೆಸರಿನ ಆ್ಯಪ್ ನಿರ್ಮಿಸಿದ್ದ.

ಸೈಬರ್ ಟೀನ್ಸ್ ಆ್ಯಪ್ 300ಕ್ಕೂ ಅಧಿಕ ಮಕ್ಕಳನ್ನು ಸೈಬರ್ ನಿಂದನೆಯಿಂದ ಬಚಾವು ಮಾಡಿದ್ದು ಎಂಟು ಜನ ತಪ್ಪಿತಸ್ಥರನ್ನು ಪತ್ತೆ ಹಚ್ಚುವಲ್ಲಿಯೂ ಸಹಕಾರಿಯಾಗಿದೆ. ಇದುವರೆಗೂ ಸುಮಾರು 45,000ಕ್ಕೂ ಹೆಚ್ಚು ಜನರನ್ನು ಸೈಬರ್ ಟೀನ್ಸ್ ಯಶಸ್ವಿಯಾಗಿ ತಲುಪಿದೆ. ಜಾಗತಿಕ ಮಟ್ಟದಲ್ಲಿ ಇದೊಂದು ಮಹತ್ವಪೂರ್ಣ ಕೆಲಸವಾಗಿದ್ದು ಆತನ ಈ ಸಾಧನೆಯನ್ನು ಪ್ರಶಂಸಿಸಿ 2020ನೇ ಸಾಲಿನ ಅಂತರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ನೊಬೆಲ್ ಪುರಸ್ಕೃತೆ ಯೂಸಫ್ ಮಲಾಲಾ ಪ್ರಶಸ್ತಿ ಘೋಷಣೆ ಮಾಡಿದ್ದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದತ್ ರೆಹಮಾನ್, ಸೈಬರ್ ಕ್ರೈಂ ಸಂಪೂರ್ಣ ನಿಂತು ಸೈಬರ್ ಟೀನ್ಸ್ ಆ್ಯಪ್ ಅವಶ್ಯಕತೆ ಇಲ್ಲ ಎಂದಾದಾಗಲೇ ನನ್ನ ನಿಜವಾದ ಗೆಲುವು ಎಂದಿದ್ದಾರೆ.

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್