AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ. ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ […]

ಸೈಬರ್ ಕ್ರೈಂ ತಡೆಗೆ ಯೋಜನೆ ರೂಪಿಸಿದ 17ರ ಪೋರನಿಗೆ ಸಿಕ್ತು ವಿಶ್ವ ಶಾಂತಿ ಪ್ರಶಸ್ತಿ!
ಆಯೇಷಾ ಬಾನು
ಆಯೇಷಾ ಬಾನು|

Updated on: Nov 16, 2020 | 1:22 PM

Share

ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಚಟುವಟಿಕೆಗಳನ್ನು ತಡೆಯಲು ಎಲ್ಲಾ ರಾಷ್ಟ್ರಗಳೂ ಹೋರಾಡುತ್ತಿವೆ. ಡಿಜಿಟಲ್ ಲೋಕದ ಅಪರಾಧಗಳು ಮಾನಸಿಕ ಹಿಂಸೆಗೆ ಅತಿ ಹೆಚ್ಚು ಕಾರಣವಾಗುತ್ತಿದ್ದು, ಎಷ್ಟೋ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಮಕ್ಕಳ ಜೀವವನ್ನೂ ಬಲಿ ಪಡೆಯುವುದರೊಂದಿಗೆ ಸುರಕ್ಷತೆ ದೃಷ್ಟಿಯಿಂದ ದೊಡ್ಡ ಸವಾಲಾಗಿಬಿಟ್ಟಿದೆ.

ಈ ಸಮಸ್ಯೆಗೆ ಪರಿಹಾರ ಹುಡುಕುವ ಸಲುವಾಗಿ ಬಾಂಗ್ಲಾದೇಶದ 17 ವರ್ಷದ ಹುಡುಗ ಸದತ್ ರೆಹಮಾನ್ ಎಂಬಾತ ಮೊಬೈಲ್ ಆ್ಯಪ್ ಒಂದನ್ನು ರಚಿಸಿದ್ದ. ಹದಿನೈದು ವರ್ಷದ ಹುಡುಗಿಯೊಬ್ಬಳು ಸೈಬರ್ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸದತ್ ಈ ರೀತಿಯ ಅಪರಾಧ ಕೃತ್ಯಗಳನ್ನು ತಡೆಯಲೇಬೇಕು ಎಂದು ನಿರ್ಧರಿಸಿ ಸೈಬರ್ ಟೀನ್ಸ್ ಹೆಸರಿನ ಆ್ಯಪ್ ನಿರ್ಮಿಸಿದ್ದ.

ಸೈಬರ್ ಟೀನ್ಸ್ ಆ್ಯಪ್ 300ಕ್ಕೂ ಅಧಿಕ ಮಕ್ಕಳನ್ನು ಸೈಬರ್ ನಿಂದನೆಯಿಂದ ಬಚಾವು ಮಾಡಿದ್ದು ಎಂಟು ಜನ ತಪ್ಪಿತಸ್ಥರನ್ನು ಪತ್ತೆ ಹಚ್ಚುವಲ್ಲಿಯೂ ಸಹಕಾರಿಯಾಗಿದೆ. ಇದುವರೆಗೂ ಸುಮಾರು 45,000ಕ್ಕೂ ಹೆಚ್ಚು ಜನರನ್ನು ಸೈಬರ್ ಟೀನ್ಸ್ ಯಶಸ್ವಿಯಾಗಿ ತಲುಪಿದೆ. ಜಾಗತಿಕ ಮಟ್ಟದಲ್ಲಿ ಇದೊಂದು ಮಹತ್ವಪೂರ್ಣ ಕೆಲಸವಾಗಿದ್ದು ಆತನ ಈ ಸಾಧನೆಯನ್ನು ಪ್ರಶಂಸಿಸಿ 2020ನೇ ಸಾಲಿನ ಅಂತರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ನೊಬೆಲ್ ಪುರಸ್ಕೃತೆ ಯೂಸಫ್ ಮಲಾಲಾ ಪ್ರಶಸ್ತಿ ಘೋಷಣೆ ಮಾಡಿದ್ದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದತ್ ರೆಹಮಾನ್, ಸೈಬರ್ ಕ್ರೈಂ ಸಂಪೂರ್ಣ ನಿಂತು ಸೈಬರ್ ಟೀನ್ಸ್ ಆ್ಯಪ್ ಅವಶ್ಯಕತೆ ಇಲ್ಲ ಎಂದಾದಾಗಲೇ ನನ್ನ ನಿಜವಾದ ಗೆಲುವು ಎಂದಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ