AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಶವ ಹೊತ್ತೊಯ್ಯುತ್ತಿದ್ದ ವಾಹನ ನಿಂತಿದ್ದ ಟ್ರಕ್​ಗೆ ಡಿಕ್ಕಿ; 18 ಮಂದಿ ಭೀಕರ ಸಾವು, ಐವರಿಗೆ ಗಾಯ

ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

West Bengal: ಶವ ಹೊತ್ತೊಯ್ಯುತ್ತಿದ್ದ ವಾಹನ ನಿಂತಿದ್ದ ಟ್ರಕ್​ಗೆ ಡಿಕ್ಕಿ; 18 ಮಂದಿ ಭೀಕರ ಸಾವು, ಐವರಿಗೆ ಗಾಯ
ನಾದಿಯಾದಲ್ಲಿ ಟ್ರಕ್​ಗೆ ಡಿಕ್ಕಿಯಾದ ವಾಹನ
TV9 Web
| Edited By: |

Updated on:Nov 28, 2021 | 10:22 AM

Share

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ಅಪಘಾತ ನಡೆದಿದೆ. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಮೆಟಡಾರ್​ ವಾಹನದಲ್ಲಿ ಸುಮಾರು 20 ಜನರು ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. 

ಈ ಮೃತದೇಹವನ್ನು ಹೊತ್ತ ವಾಹನವು ರಸ್ತೆ ಬದಿಯಲ್ಲಿದ್ದ ಟ್ರಕ್​​ವೊಂದಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ನಡೆದಿದ್ದು ಹಂಸಖಲಿ ಪೊಲೀಸ್​ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ. ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್​ಗೆ ಹೋಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೇ, ಹೆಚ್ಚಿನ ತನಿಖೆಯನ್ನೂ ಕೈಗೆತ್ತಿಕೊಂಡಿದ್ದಾರೆ.

ಇನ್ನು ಮೆಟಡಾರ್​​ ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿಯಲ್ಲಿ 18 ಜನರು ಸಾವನ್ನಪ್ಪಿದ್ದು ಅದರಲ್ಲಿ 10 ಪುರುಷರು, ಏಳು ಮಹಿಳೆಯರು ಮತ್ತು ಒಬ್ಬಳು ಆರುವರ್ಷದ ಬಾಲಕಿ ಇದ್ದಾಳೆ. ಇವರೆಲ್ಲ ಬಂಧು-ಬಳಗದವರೇ ಆಗಿದ್ದಾರೆ. ಬಾಗ್ಡಾದ ಬಳಿಯ ಪರ್ಮಧಾನ್​ ಎಂಬಲ್ಲಿಯ ನಿವಾಸಿಯಾಗಿದ್ದ ಶ್ರಬಣಿ ಮುಹುರಿ ಎಂಬ ವೃದ್ಧೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಗಾಗಿ ಇವರೆಲ್ಲರೂ ಹೊರಟಿದ್ದರು.

ಇದನ್ನೂ ಓದಿ: ನೆಲಮಂಗಲ: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ; ಓರ್ವನ ಬಂಧನ

Published On - 9:52 am, Sun, 28 November 21

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!