AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಶವ ಹೊತ್ತೊಯ್ಯುತ್ತಿದ್ದ ವಾಹನ ನಿಂತಿದ್ದ ಟ್ರಕ್​ಗೆ ಡಿಕ್ಕಿ; 18 ಮಂದಿ ಭೀಕರ ಸಾವು, ಐವರಿಗೆ ಗಾಯ

ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

West Bengal: ಶವ ಹೊತ್ತೊಯ್ಯುತ್ತಿದ್ದ ವಾಹನ ನಿಂತಿದ್ದ ಟ್ರಕ್​ಗೆ ಡಿಕ್ಕಿ; 18 ಮಂದಿ ಭೀಕರ ಸಾವು, ಐವರಿಗೆ ಗಾಯ
ನಾದಿಯಾದಲ್ಲಿ ಟ್ರಕ್​ಗೆ ಡಿಕ್ಕಿಯಾದ ವಾಹನ
TV9 Web
| Edited By: |

Updated on:Nov 28, 2021 | 10:22 AM

Share

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ಅಪಘಾತ ನಡೆದಿದೆ. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಮೆಟಡಾರ್​ ವಾಹನದಲ್ಲಿ ಸುಮಾರು 20 ಜನರು ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. 

ಈ ಮೃತದೇಹವನ್ನು ಹೊತ್ತ ವಾಹನವು ರಸ್ತೆ ಬದಿಯಲ್ಲಿದ್ದ ಟ್ರಕ್​​ವೊಂದಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ನಡೆದಿದ್ದು ಹಂಸಖಲಿ ಪೊಲೀಸ್​ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ. ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್​ಗೆ ಹೋಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೇ, ಹೆಚ್ಚಿನ ತನಿಖೆಯನ್ನೂ ಕೈಗೆತ್ತಿಕೊಂಡಿದ್ದಾರೆ.

ಇನ್ನು ಮೆಟಡಾರ್​​ ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿಯಲ್ಲಿ 18 ಜನರು ಸಾವನ್ನಪ್ಪಿದ್ದು ಅದರಲ್ಲಿ 10 ಪುರುಷರು, ಏಳು ಮಹಿಳೆಯರು ಮತ್ತು ಒಬ್ಬಳು ಆರುವರ್ಷದ ಬಾಲಕಿ ಇದ್ದಾಳೆ. ಇವರೆಲ್ಲ ಬಂಧು-ಬಳಗದವರೇ ಆಗಿದ್ದಾರೆ. ಬಾಗ್ಡಾದ ಬಳಿಯ ಪರ್ಮಧಾನ್​ ಎಂಬಲ್ಲಿಯ ನಿವಾಸಿಯಾಗಿದ್ದ ಶ್ರಬಣಿ ಮುಹುರಿ ಎಂಬ ವೃದ್ಧೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಗಾಗಿ ಇವರೆಲ್ಲರೂ ಹೊರಟಿದ್ದರು.

ಇದನ್ನೂ ಓದಿ: ನೆಲಮಂಗಲ: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ; ಓರ್ವನ ಬಂಧನ

Published On - 9:52 am, Sun, 28 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ