AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ

ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು
ಮೃತ ಆನೆಗಳು
Lakshmi Hegde
|

Updated on:May 13, 2021 | 10:05 PM

Share

ಆಸ್ಸಾಂನ ನಾಗೋನ್​ ಮತ್ತು ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಗಡಿ ಭಾಗದಲ್ಲಿರುವ ಗುಡ್ಡದ ಮೇಲೆ ಇಂದು ಸುಮಾರು 18 ಕಾಡಾನೆಗಳ ಮೃತದೇಹ ಸಿಕ್ಕಿದೆ. ಈ ಗುಡ್ಡದ ಎರಡು ಭಾಗಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಸಿಡಿಲು ಬಡಿದಿದ್ದೇ ಆನೆಗಳ ಸಾವಿಗೆ ಕಾರಣ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆನೆಗಳ ಸಾವಿನ ಬಗ್ಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಅಸ್ಸಾಂನ ಅರಣ್ಯ ವನ್ಯಜೀವಿ ವಿಭಾಗದ ಪ್ರಧಾನ ಸಂರಕ್ಷಣಾಧಿಕಾರಿ ಅಮಿತ್ ಸಹಯ್​, ಕತಿಯಾಟೋಲಿ ವಲಯದ ಕುಂಡೋಲಿ ಸಂರಕ್ಷಿತ ಅರಣ್ಯದ ಗುಡ್ಡಗಾಡು ಪ್ರದೇಶದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಒಂದು ಕಡೆ ನಾಲ್ಕು ಆನೆಗಳು ಸತ್ತಿವೆ. ಇನ್ನೊಂದು ಕಡೆಯಲ್ಲಿ 14 ಆನೆಗಳು ಮೃತಪಟ್ಟಿವೆ. ಸಿಡಿಲು ಬಡಿದಿದ್ದೇ ಈ ಆನೆಗಳ ಸಾವಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಆನೆಗಳ ಸಾವಿನ ಬಗ್ಗೆ ಅಸ್ಸಾಂ ಅರಣ್ಯ ಸಚಿವ ಪರಿಮಳ್​ ಶುಕ್ಲಬೈದ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಆನೆಗಳು ಮೃತಪಟ್ಟಿರುವ ಸ್ಥಳಕ್ಕೆ ಶುಕ್ರವಾರ ಭೇಟಿಕೊಡುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

Published On - 10:04 pm, Thu, 13 May 21

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ