AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ

ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು
ಮೃತ ಆನೆಗಳು
Lakshmi Hegde
|

Updated on:May 13, 2021 | 10:05 PM

Share

ಆಸ್ಸಾಂನ ನಾಗೋನ್​ ಮತ್ತು ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಗಡಿ ಭಾಗದಲ್ಲಿರುವ ಗುಡ್ಡದ ಮೇಲೆ ಇಂದು ಸುಮಾರು 18 ಕಾಡಾನೆಗಳ ಮೃತದೇಹ ಸಿಕ್ಕಿದೆ. ಈ ಗುಡ್ಡದ ಎರಡು ಭಾಗಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಸಿಡಿಲು ಬಡಿದಿದ್ದೇ ಆನೆಗಳ ಸಾವಿಗೆ ಕಾರಣ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆನೆಗಳ ಸಾವಿನ ಬಗ್ಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಅಸ್ಸಾಂನ ಅರಣ್ಯ ವನ್ಯಜೀವಿ ವಿಭಾಗದ ಪ್ರಧಾನ ಸಂರಕ್ಷಣಾಧಿಕಾರಿ ಅಮಿತ್ ಸಹಯ್​, ಕತಿಯಾಟೋಲಿ ವಲಯದ ಕುಂಡೋಲಿ ಸಂರಕ್ಷಿತ ಅರಣ್ಯದ ಗುಡ್ಡಗಾಡು ಪ್ರದೇಶದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಒಂದು ಕಡೆ ನಾಲ್ಕು ಆನೆಗಳು ಸತ್ತಿವೆ. ಇನ್ನೊಂದು ಕಡೆಯಲ್ಲಿ 14 ಆನೆಗಳು ಮೃತಪಟ್ಟಿವೆ. ಸಿಡಿಲು ಬಡಿದಿದ್ದೇ ಈ ಆನೆಗಳ ಸಾವಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಆನೆಗಳ ಸಾವಿನ ಬಗ್ಗೆ ಅಸ್ಸಾಂ ಅರಣ್ಯ ಸಚಿವ ಪರಿಮಳ್​ ಶುಕ್ಲಬೈದ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಆನೆಗಳು ಮೃತಪಟ್ಟಿರುವ ಸ್ಥಳಕ್ಕೆ ಶುಕ್ರವಾರ ಭೇಟಿಕೊಡುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

Published On - 10:04 pm, Thu, 13 May 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ