AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Jan 04, 2021 | 7:08 PM

Share

ಚೆನ್ನೈ: ಯುವತಿಯೊಬ್ಬಳು ತನ್ನನ್ನು ಅತ್ಯಾಚಾರ ಮಾಡಲು ಬಂದವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ತಿರುವಲ್ಲೂರ್ ಜಿಲ್ಲೆಯಲ್ಲಿ ನಡೆದಿದೆ.

ಅಜಿತ್​ (25) ಕೊಲೆಯಾದ ವ್ಯಕ್ತಿ. ಈತ ಯುವತಿಯ ಸಂಬಂಧಿಯೇ ಆಗಿದ್ದು, ಇಬ್ಬರೂ ಒಂದೇ ಗ್ರಾಮದ ನಿವಾಸಿಗಳೇ ಆಗಿದ್ದಾರೆ. ನಿರುದ್ಯೋಗಿ ಆಗಿದ್ದ ಅಜಿತ್​, ಕುಡಿತಕ್ಕೆ ದಾಸನಾಗಿದ್ದ. ಮದುವೆಯಾಗಿದ್ದರೂ ಪತ್ನಿಯಿಂದ ದೂರವಾಗಿದ್ದ. ಹಾಗೇ, ಈತನಿಗೆ ಎರಡು ವರ್ಷ ಹಾಗೂ ಆರು ತಿಂಗಳು ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಅಷ್ಟೆಲ್ಲ ಆದರೂ ತನ್ನ ಸಂಬಂಧಿಯೇ ಆಗಿದ್ದ ಯುವತಿಯ ತಂಟೆಗೆ ಹೋಗಿ, ಹತ್ಯೆಗೀಡಾಗಿದ್ದಾನೆ.

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ. ಮೊದಲು ಯುವತಿ ತನ್ನನ್ನು ಬಿಟ್ಟುಬಿಡುವಂತೆ ಆತನಲ್ಲಿ ಮನವಿ ಮಾಡಿದಳು. ಆಗಲೇ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡಿದ್ದ ಅಜಿತ್​ ಆಕೆಯನ್ನು ಬಿಡಲಿಲ್ಲ. ಆಗ ಯುವತಿ ಬೇರೆ ದಾರಿ ಕಾಣದೆ ಆತನನ್ನು ತಳ್ಳಿದಳು. ಅಷ್ಟಕ್ಕೇ ಸುಮ್ಮನಾಗದೆ, ಕೆಳಗೆ ಬಿದ್ದಿದ್ದ ಅವನ ಮೇಲೆ ಚಾಕುವಿನಿಂದ ಹಲ್ಲೆಯನ್ನೂ ಮಾಡಿ, ಓಡಿಹೋಗಿದ್ದಾಳೆ. ಆತ ಅಲ್ಲಿಯೇ ಸಾವನ್ನಪ್ಪಿದ್ದಾನೆ.

ಯುವತಿ ಅಲ್ಲಿಂದ ಪೊಲೀಸ್ ಠಾಣೆಗೆ ಹೋಗಿ ಘಟನೆಯನ್ನು ವಿವರಿಸಿದ್ದಾಳೆ. ನನ್ನನ್ನು ನಾನು ಕಾಪಾಡಿಕೊಳ್ಳುವ ಸಲುವಾಗಿ ಹೀಗೆ ಮಾಡಿದೆ ಎಂದು ಒಪ್ಪಿಕೊಂಡಿದ್ದಾಳೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಇದುವರೆಗೂ ಯುವತಿಯನ್ನು ಬಂಧಿಸಿಲ್ಲ ಎಂದು ಶೋಲಾವರಂ ಠಾಣೆ ಪೊಲಿಸರು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!