AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Jan 04, 2021 | 7:08 PM

Share

ಚೆನ್ನೈ: ಯುವತಿಯೊಬ್ಬಳು ತನ್ನನ್ನು ಅತ್ಯಾಚಾರ ಮಾಡಲು ಬಂದವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ತಿರುವಲ್ಲೂರ್ ಜಿಲ್ಲೆಯಲ್ಲಿ ನಡೆದಿದೆ.

ಅಜಿತ್​ (25) ಕೊಲೆಯಾದ ವ್ಯಕ್ತಿ. ಈತ ಯುವತಿಯ ಸಂಬಂಧಿಯೇ ಆಗಿದ್ದು, ಇಬ್ಬರೂ ಒಂದೇ ಗ್ರಾಮದ ನಿವಾಸಿಗಳೇ ಆಗಿದ್ದಾರೆ. ನಿರುದ್ಯೋಗಿ ಆಗಿದ್ದ ಅಜಿತ್​, ಕುಡಿತಕ್ಕೆ ದಾಸನಾಗಿದ್ದ. ಮದುವೆಯಾಗಿದ್ದರೂ ಪತ್ನಿಯಿಂದ ದೂರವಾಗಿದ್ದ. ಹಾಗೇ, ಈತನಿಗೆ ಎರಡು ವರ್ಷ ಹಾಗೂ ಆರು ತಿಂಗಳು ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಅಷ್ಟೆಲ್ಲ ಆದರೂ ತನ್ನ ಸಂಬಂಧಿಯೇ ಆಗಿದ್ದ ಯುವತಿಯ ತಂಟೆಗೆ ಹೋಗಿ, ಹತ್ಯೆಗೀಡಾಗಿದ್ದಾನೆ.

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ. ಮೊದಲು ಯುವತಿ ತನ್ನನ್ನು ಬಿಟ್ಟುಬಿಡುವಂತೆ ಆತನಲ್ಲಿ ಮನವಿ ಮಾಡಿದಳು. ಆಗಲೇ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡಿದ್ದ ಅಜಿತ್​ ಆಕೆಯನ್ನು ಬಿಡಲಿಲ್ಲ. ಆಗ ಯುವತಿ ಬೇರೆ ದಾರಿ ಕಾಣದೆ ಆತನನ್ನು ತಳ್ಳಿದಳು. ಅಷ್ಟಕ್ಕೇ ಸುಮ್ಮನಾಗದೆ, ಕೆಳಗೆ ಬಿದ್ದಿದ್ದ ಅವನ ಮೇಲೆ ಚಾಕುವಿನಿಂದ ಹಲ್ಲೆಯನ್ನೂ ಮಾಡಿ, ಓಡಿಹೋಗಿದ್ದಾಳೆ. ಆತ ಅಲ್ಲಿಯೇ ಸಾವನ್ನಪ್ಪಿದ್ದಾನೆ.

ಯುವತಿ ಅಲ್ಲಿಂದ ಪೊಲೀಸ್ ಠಾಣೆಗೆ ಹೋಗಿ ಘಟನೆಯನ್ನು ವಿವರಿಸಿದ್ದಾಳೆ. ನನ್ನನ್ನು ನಾನು ಕಾಪಾಡಿಕೊಳ್ಳುವ ಸಲುವಾಗಿ ಹೀಗೆ ಮಾಡಿದೆ ಎಂದು ಒಪ್ಪಿಕೊಂಡಿದ್ದಾಳೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಇದುವರೆಗೂ ಯುವತಿಯನ್ನು ಬಂಧಿಸಿಲ್ಲ ಎಂದು ಶೋಲಾವರಂ ಠಾಣೆ ಪೊಲಿಸರು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ