AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Jan 04, 2021 | 7:08 PM

Share

ಚೆನ್ನೈ: ಯುವತಿಯೊಬ್ಬಳು ತನ್ನನ್ನು ಅತ್ಯಾಚಾರ ಮಾಡಲು ಬಂದವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ತಿರುವಲ್ಲೂರ್ ಜಿಲ್ಲೆಯಲ್ಲಿ ನಡೆದಿದೆ.

ಅಜಿತ್​ (25) ಕೊಲೆಯಾದ ವ್ಯಕ್ತಿ. ಈತ ಯುವತಿಯ ಸಂಬಂಧಿಯೇ ಆಗಿದ್ದು, ಇಬ್ಬರೂ ಒಂದೇ ಗ್ರಾಮದ ನಿವಾಸಿಗಳೇ ಆಗಿದ್ದಾರೆ. ನಿರುದ್ಯೋಗಿ ಆಗಿದ್ದ ಅಜಿತ್​, ಕುಡಿತಕ್ಕೆ ದಾಸನಾಗಿದ್ದ. ಮದುವೆಯಾಗಿದ್ದರೂ ಪತ್ನಿಯಿಂದ ದೂರವಾಗಿದ್ದ. ಹಾಗೇ, ಈತನಿಗೆ ಎರಡು ವರ್ಷ ಹಾಗೂ ಆರು ತಿಂಗಳು ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಅಷ್ಟೆಲ್ಲ ಆದರೂ ತನ್ನ ಸಂಬಂಧಿಯೇ ಆಗಿದ್ದ ಯುವತಿಯ ತಂಟೆಗೆ ಹೋಗಿ, ಹತ್ಯೆಗೀಡಾಗಿದ್ದಾನೆ.

ಯುವತಿ ಶೋಲಾವರಂನಲ್ಲಿರುವ ತನ್ನ ಚಿಕ್ಕಮ್ಮನನ್ನು ನೋಡಲು ಆಗಮಿಸಿದ್ದಳು. ಈ ವೇಳೆ ಆಕೆಯನ್ನು ಅಜಿತ್ ಹಿಂಬಾಲಿಸಿಕೊಂಡು ಬಂದಿದ್ದ. ಯುವತಿ ಚಿಕ್ಕಮ್ಮನ ಮನೆಯ ಬಳಿಯಿರುವ ಕುದುರೆ ಲಾಯದ ಪಕ್ಕದ ಶೌಚಗೃಹಕ್ಕೆ ಹೊರಟಾಗ, ಆಕೆಯನ್ನು ತಡೆದು ಅತ್ಯಾಚಾರ ಮಾಡಲು ಯತ್ನಿಸಿದ. ಮೊದಲು ಯುವತಿ ತನ್ನನ್ನು ಬಿಟ್ಟುಬಿಡುವಂತೆ ಆತನಲ್ಲಿ ಮನವಿ ಮಾಡಿದಳು. ಆಗಲೇ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡಿದ್ದ ಅಜಿತ್​ ಆಕೆಯನ್ನು ಬಿಡಲಿಲ್ಲ. ಆಗ ಯುವತಿ ಬೇರೆ ದಾರಿ ಕಾಣದೆ ಆತನನ್ನು ತಳ್ಳಿದಳು. ಅಷ್ಟಕ್ಕೇ ಸುಮ್ಮನಾಗದೆ, ಕೆಳಗೆ ಬಿದ್ದಿದ್ದ ಅವನ ಮೇಲೆ ಚಾಕುವಿನಿಂದ ಹಲ್ಲೆಯನ್ನೂ ಮಾಡಿ, ಓಡಿಹೋಗಿದ್ದಾಳೆ. ಆತ ಅಲ್ಲಿಯೇ ಸಾವನ್ನಪ್ಪಿದ್ದಾನೆ.

ಯುವತಿ ಅಲ್ಲಿಂದ ಪೊಲೀಸ್ ಠಾಣೆಗೆ ಹೋಗಿ ಘಟನೆಯನ್ನು ವಿವರಿಸಿದ್ದಾಳೆ. ನನ್ನನ್ನು ನಾನು ಕಾಪಾಡಿಕೊಳ್ಳುವ ಸಲುವಾಗಿ ಹೀಗೆ ಮಾಡಿದೆ ಎಂದು ಒಪ್ಪಿಕೊಂಡಿದ್ದಾಳೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಇದುವರೆಗೂ ಯುವತಿಯನ್ನು ಬಂಧಿಸಿಲ್ಲ ಎಂದು ಶೋಲಾವರಂ ಠಾಣೆ ಪೊಲಿಸರು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?