AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1947ರ ಸ್ವಾತಂತ್ರ್ಯ ಸಿಕ್ಕಿದ್ದು ಭಿಕ್ಷೆಯಂತೆ: ನಟಿ ಕಂಗನಾ ರನೌತ್ ಹೇಳಿಕೆಗೆ ಹಿರಿಯ ನಟ ವಿಕ್ರಮ್ ಗೋಖಲೆ ಬೆಂಬಲ

ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬೇಕು ಎಂದು ಹೋರಾಟಗಾರರು ಶ್ರಮಿಸಿದ್ದರು. ಆದರೆ ಆ ಕಾಲದ ದೊಡ್ಡವರು ಅವರನ್ನು ಉಳಿಸಲು ಪ್ರಯತ್ನ ಪಡಲಿಲ್ಲ ಎಂದು ವಿಕ್ರಮ್ ಗೋಖಲೆ ತಿಳಿಸಿದರು.

1947ರ ಸ್ವಾತಂತ್ರ್ಯ ಸಿಕ್ಕಿದ್ದು ಭಿಕ್ಷೆಯಂತೆ: ನಟಿ ಕಂಗನಾ ರನೌತ್ ಹೇಳಿಕೆಗೆ ಹಿರಿಯ ನಟ ವಿಕ್ರಮ್ ಗೋಖಲೆ ಬೆಂಬಲ
ನಟ ವಿಕ್ರಮ್ ಗೋಖಲೆ ಮತ್ತು ನಟಿ ಕಂಗನಾ ರನೌತ್
TV9 Web
| Edited By: |

Updated on: Nov 14, 2021 | 9:12 PM

Share

ಪುಣೆ: ಭಾರತವು 1947ರಲ್ಲಿ ಭಿಕ್ಷೆಯ ರೂಪದಲ್ಲಿ ಸ್ವಾತಂತ್ರ್ಯ ಪಡೆಯಿತು ಎಂಬ ನಟಿ ಕಂಗನಾ ರನೌತ್ ಹೇಳಿಕೆಯನ್ನು ಹಿರಿಯ ನಟ ವಿಕ್ರಮ್ ಗೋಖಲೆ ಸಮರ್ಥಿಸಿಕೊಂಡಿದ್ದಾರೆ. ತಮಗೆ 75 ವರ್ಷ ತುಂಬಿದ ಪ್ರಯುಕ್ತ ಪುಣೆಯ ಬ್ರಾಹ್ಮಣ ಮಹಾಸಂಘ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಂಗನಾರ ಹೇಳಿಕೆಗಳನ್ನು ನಾನು ಒಪ್ಪುತ್ತೇನೆ’ ಎಂದರು. ‘ನಾವು ಸ್ವಾತಂತ್ರ್ಯ ಪಡೆದದ್ದು ಭಿಕ್ಷೆಯಿಂದಲೇ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬೇಕು ಎಂದು ಹೋರಾಟಗಾರರು ಶ್ರಮಿಸಿದ್ದರು. ಆದರೆ ಆ ಕಾಲದ ದೊಡ್ಡವರು ಅವರನ್ನು ಉಳಿಸಲು ಪ್ರಯತ್ನ ಪಡಲಿಲ್ಲ. ಈ ಬಗ್ಗೆ ನಾನು ಸಾಕಷ್ಟು ಓದಿಕೊಂಡಿದ್ದೇನೆ. ಕಂಗನಾ ಏನು ಹೇಳಿದ್ದಾರೋ ಅದಕ್ಕೆ ನನ್ನ ಸಮ್ಮತಿಯಿದೆ ಎಂದು ಮತ್ತೊಮ್ಮೆ ಕಂಗನಾ ರನೌತ್​ರ ಹೇಳಿಕೆಯನ್ನು ಸಮರ್ಥಿಸಿದರು.

ಮರಾಠಿ ಮತ್ತು ಹಿಂದಿ ಸಿನಿಮಾಗಳಲ್ಲಿ ತಕ್ಕಮಟ್ಟಿಗೆ ಹೆಸರು ಮಾಡಿರುವ ಗೋಖಲೆ, ಶಿವಸೇನೆ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ದೂರ ಸರಿಯಬಾರದಿತ್ತು ಎಂದೂ ಅಭಿಪ್ರಾಯಪಟ್ಟರು. ದೇಶವು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಎರಡೂ ಪಕ್ಷಗಳು ಒಗ್ಗೂಡಿ ಹೋರಾಡಬೇಕಿತ್ತು ಎಂದು ಹೇಳಿದರು.

ಬಾಳಾಸಾಹೇಬ್ ಠಾಕ್ರೆ ಅವರ ನಿಧನದ ನಂತರ ರಾಜಕೀಯ ಆಟದ ನಿಯಮಗಳೇ ಬದಲಾಗಿವೆ. ಮರಾಠಿ ರಾಜಕಾರಣಿಗಳು ಶಕ್ತಿಹೀನರಂತೆ ಕಾಣಿಸುತ್ತಾರೆ. ರಾಜ್ಯದ ಜನರು ಏನು ಯೋಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಿಗೆ ಹೆಚ್ಚು ತಿಳಿದಿಲ್ಲ. ಆದರೆ ರಾಜ್ಯವ್ಯಾಪಿ ಓಡಾಡುವ ಮತ್ತು ಸಾಮಾನ್ಯ ಜನರೊಂದಿಗೆ ನಿಯಮಿತ ಸಂಪರ್ಕದಲ್ಲಿರುವ ನನಗೆ ಜನರ ಆಲೋಚನೆ ಏನು ಎಂಬುದು ತಿಳಿದಿದೆ. ಶಿವಸೇನೆ ಮತ್ತು ಬಿಜೆಪಿ ಬೇರೆಯಾಗಿದ್ದು ತಮಗೆ ಇಷ್ಟವಾಗಿಲ್ಲ ಎಂದೇ ಹಲವರು ಅಭಿಪ್ರಾಯಪಡುತ್ತಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ಒಗ್ಗೂಡಿ ದೇಶವನ್ನು ಅಪಾಯದಿಂದ ಕಾಪಾಡಬೇಕಿದೆ ಎಂದು ಹೇಳಿದರು. ಆದರೆ ಆ ಅಪಾಯ ಏನು ಎಂದು ವಿವರಿಸಲಿಲ್ಲ.

ಎರಡೂ ಕೇಸರಿ ಪಕ್ಷಗಳನ್ನು ಒಗ್ಗೂಡಿಸಲು ನಾನು ನಿರಂತರ ಶ್ರಮಿಸುತ್ತಿದ್ದೇನೆ ಎಂದು ಗೋಖಲೆ ನುಡಿದರು. ಶಿವಸೇನೆಗೆ ಎರಡೂವರೆ ವರ್ಷ ಮುಖ್ಯಮಂತ್ರಿ ಬಿಟ್ಟುಕೊಡಲು ಒಪ್ಪಲಿಲ್ಲವೇಕೆ ಎಂದು ದೇವೇಂದ್ರ ಫಡಣವೀಸ್ ಅವರನ್ನು ಪ್ರಶ್ನಿಸಿದೆ. ಅದೊಂದು ತಪ್ಪು ನಿರ್ಧಾರವಾಗಿತ್ತು ಎಂದು ಫಡಣವೀಸ್ ನನಗೆ ಉತ್ತರಿಸಿದ್ದರು. ಅವರಿಬ್ಬರ ನಡುವೆ ಏನೆಲ್ಲಾ ಆಯಿತು ಎಂಬುದನ್ನು ಇನ್ನಾದರೂ ಎರಡೂ ಪಕ್ಷಗಳು ಜನರಿಗೆ ತಿಳಿಸಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಇಬ್ಬರೂ ಮುಂದುವರಿಯಬೇಕು. ನೀವು ಜನರಿಗೆ ವಂಚಿಸಿದರೆ ಅವರು ನಿಮ್ಮನ್ನು ಚೆನ್ನಾಗಿ ಶಿಕ್ಷಿಸುತ್ತಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿಯೂ ನಾನು ಉದ್ಧವ್ ಠಾಕ್ರೆ ಮತ್ತು ದೇವೇಂದ್ರ ಫಡಣವೀಸ್ ಅವರನ್ನು ಖಾಸಗಿಯಾಗಿ ಭೇಟಿಯಾಗುತ್ತೇನೆ. ನೀವು ಪಕ್ಷದ ಬೆಂಬಲಿಗರಾಗಿದ್ದರೆ ದೇಶವನ್ನು ಉಳಿಸಲು ಏನಾದರೂ ಮಾಡಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Kangana Ranaut: 1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ; ವಿವಾದ ಸೃಷ್ಟಿಸಿದ ಕಂಗನಾ ಹೇಳಿಕೆ ಇದನ್ನೂ ಓದಿ: 1947ರಲ್ಲಿ ಭಾರತಕ್ಕೆ ಲಭಿಸಿದ್ದು ಸ್ವಾತಂತ್ರ್ಯವಲ್ಲ, ಭಿಕ್ಷೆ ಎಂದ ಕಂಗನಾ ವಿರುದ್ಧ ತಿರುಗಿಬಿದ್ದ ಬಿಜೆಪಿ; ಪದ್ಮ ಪ್ರಶಸ್ತಿ ಹಿಂಪಡೆಯಲು ಆಗ್ರಹಿಸಿದ ಕಾಂಗ್ರೆಸ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ