AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ

1984ರ ಸಿಖ್ ವಿರೋಧಿ​​​ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ರೋಸ್​ಅವೆನ್ಯೂ ವಿಶೇಷ ಕೋರ್ಟ್ ಇಂದು ತೀರ್ಪು ನೀಡಿದೆ. ಈ ಹಿಂದೆಯೇ ನ್ಯಾಯಾಲಯ ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ, ಶಿಕ್ಷೆಯ ಪ್ರಮಾಣವನ್ನು ಇಂದು ಘೋಷಿಸಲಾಗಿದೆ.

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ
Sajjan Kumar
ಸುಷ್ಮಾ ಚಕ್ರೆ
|

Updated on: Feb 25, 2025 | 3:04 PM

Share

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ನೇತೃತ್ವ ವಹಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ.ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ವಿಶೇಷ ಕೋರ್ಟ್​ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಈಗಾಗಲೇ ಸಜ್ಜನ್​ ಕುಮಾರ್​​ ಅಪರಾಧಿ ಎಂದು ತೀರ್ಪು ನೀಡಿತ್ತು. 1984ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದಿದ್ದ ಘಟನೆಯಲ್ಲಿ 1984ರ ನವೆಂಬರ್ 1ರಂದು ತಂದೆ, ಮಗನ ಕೊಲೆ ಆಗಿತ್ತು. ತಂದೆ ಜಸ್ವಂತ್ ಸಿಂಗ್, ಮಗ ತರುಣ್‌ದೀಪ್ ಸಿಂಗ್ ಕೊಲೆ ನಡೆದಿತ್ತು. ಸಜ್ಜನ್ ಕುಮಾರ್​​ ನೇತೃತ್ವದ ಗುಂಪಿನ ವಿರುದ್ಧ ಕೇಸ್ ದಾಖಲಾಗಿತ್ತು. ಪಂಜಾಬಿ ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್‌ ಅಪರಾಧಿ ಎಂದು ತೀರ್ಪು

ಈ ಬಗ್ಗೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿತ್ತು. ದೆಹಲಿ ಕಂಟೋನ್ಮೆಂಟ್ ದಂಗೆ ಪ್ರಕರಣದಲ್ಲಿ ಭಾಗಿಯಾಗಿ ಈಗಾಗಲೇ ಶಿಕ್ಷೆ ಅನುಭವಿಸುತ್ತಿರುವ ಸಜ್ಜನ್ ಕುಮಾರ್ ಅವರಿಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ಸಜ್ಜನ್ ಕುಮಾರ್‌ಗೆ ಮರಣದಂಡನೆ ವಿಧಿಸುವಂತೆ ಪೊಲೀಸರು ಕೋರಿದ್ದರು. ಆದರೆ, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಸಜ್ಜನ್ ಕುಮಾರ್ ಮುನ್ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ದೂರಿನ ಪ್ರಕಾರ, ಕೋಪಗೊಂಡ ಗುಂಪೊಂದು ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿ, ಅವರ ಪತಿ ಮತ್ತು ಮಗನನ್ನು ಕೊಲೆ ಮಾಡಿತ್ತು.

1984ರಲ್ಲಿ ಏನಾಯಿತು?:

ಸಿಖ್ಖರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಸಶಸ್ತ್ರ ಗುಂಪೊಂದು ಸಿಖ್ಖರ ವಿರುದ್ಧ ದೊಡ್ಡ ಪ್ರಮಾಣದ ಬೆಂಕಿ ಹಚ್ಚುವಿಕೆ ಮತ್ತು ಆಸ್ತಿಪಾಸ್ತಿಗಳ ನಾಶಕ್ಕೆ ಮುಂದಾಯಿತು. ಗುಂಪೊಂದು ಜಸ್ವಂತ್ ಸಿಂಗ್ ಮತ್ತು ಅವರ ಮಗನನ್ನು ಕೊಂದು ಅವರ ಮನೆಯನ್ನು ಲೂಟಿ ಮಾಡಿತು. ನಂತರ ಅವರು ಮನೆಯನ್ನು ಸುಟ್ಟುಹಾಕಿದ್ದರು. ಸಜ್ಜನ್ ಕುಮಾರ್ ಅವರೇ ಈ ಗುಂಪಿನ ನೇತೃತ್ವ ವಹಿಸಿ, ಕೊಲೆಯ ಮುಂದಾಳತ್ವ ವಹಿಸಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಕೂಡ ಸಿಕ್ಕಿತ್ತು.

ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ: ಫೆ.21 ರಂದು ನ್ಯಾಯಾಲಯದಿಂದ ಸಜ್ಜನ್ ಕುಮಾರ್​ಗೆ ಶಿಕ್ಷೆ ಪ್ರಕಟ

ಸಜ್ಜನ್ ಕುಮಾರ್ ಯಾರು?:

ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಮಾಜಿ ಸಂಸದರಾಗಿದ್ದು, 1984ರ ಸಿಖ್ ದಂಗೆ ಪ್ರಕರಣದಲ್ಲಿ 2018ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. 1977ರಲ್ಲಿ ದೆಹಲಿ ಮಹಾನಗರ ಪಾಲಿಕೆಗೆ ಮೊದಲು ಆಯ್ಕೆಯಾದ ಸಜ್ಜನ್ ಕುಮಾರ್ ಅದೇ ವರ್ಷ ದೆಹಲಿ ಕೌನ್ಸಿಲರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ದೆಹಲಿಯ ಸಕ್ರಿಯ ರಾಜಕಾರಣಿಯಾಗಿದ್ದ ಅವರು 2004ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಿಂದ ಗೆದ್ದರು.

1984ರ ನವೆಂಬರ್ 1ರಂದು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆಗಿನ ಪ್ರಧಾನಿ ಕಾಂಗ್ರೆಸ್‌ನ ಇಂದಿರಾ ಗಾಂಧಿಯವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಸಿಖ್ ಸಮುದಾಯದ ಮೇಲೆ ದಾಳಿ ಮಾಡಲು ಸಜ್ಜನ್ ಕುಮಾರ್ ಜನರ ಗುಂಪನ್ನು ಪ್ರಚೋದಿಸಿದ್ದರು. ಅದಕ್ಕೂ ಒಂದು ದಿನ ಮೊದಲು ಇಂದಿರಾ ಗಾಂಧಿಯವರ ಮೇಲೆ ಸಿಖ್ ಅಂಗರಕ್ಷಕರು ಗುಂಡು ಹಾರಿಸಿ ಕೊಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ