Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೌರಿ ಎನ್​ಕೌಂಟರ್​: ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ. ಬುಧವಾರ (ಸೆಪ್ಟೆಂಬರ್ 22) ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ರಜೌರಿ ಎನ್​ಕೌಂಟರ್​: ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮ
ಸೈನಿಕರುImage Credit source: ABP Live
Follow us
ನಯನಾ ರಾಜೀವ್
|

Updated on:Nov 23, 2023 | 10:44 AM

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ. ಬುಧವಾರ (ಸೆಪ್ಟೆಂಬರ್ 22) ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ ಯೋಧರಾಗಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು.

ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಲ್ಲಿನ ಸ್ಥಳೀಯರಿಗೆ ಮನೆ ಬಿಟ್ಟು ಹೊರಗಡೆ ತೆರಳದಂತೆ ಸೂಚಿಸಲಾಗಿತ್ತು, ಮಕ್ಕಳು ಕೂಡ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಎನ್​ಕೌಂಟರ್​ ನಡೆಯುತ್ತಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Encounter In UP: ಯುಪಿಯಲ್ಲಿ ಕಳೆದ 6 ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಎನ್​ಕೌಂಟರ್​ಗಳು, 63 ಕ್ರಿಮಿನಲ್​ಗಳ ಹತ್ಯೆ

ಇಬ್ಬರು ಭಯೋತ್ಪಾದಕರು ವಿದೇಶಿ ಪ್ರಜೆಯಾಗಿದ್ದಾರೆ, ಮತ್ತು ಇದೇ ಪ್ರದೇಶದಲ್ಲಿ ತಿರುಗಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿತ್ತು. ಪ್ರತಿ ದಿನವೂ ಒಂದಲ್ಲಾ ಒಂದು ರೀತಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಉಗ್ರರು ಯತ್ನಿಸುತ್ತಲೇ ಇರುತ್ತಾರೆ, ಆದರೆ ಗಡಿ ಭದ್ರತಾ ಪಡೆ ಅದ್ಯಾವುದಕ್ಕೂ ಕಿಂಚಿತ್ತು ಅವಕಾಶವನ್ನು ಮಾಡಿಕೊಡುತ್ತಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:37 am, Thu, 23 November 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!