AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ರಕ್ತಸಿಕ್ತ ಸ್ಥಿತಿಯಲ್ಲಿ ಎರಡು ಶವ ಪತ್ತೆ

ಮಣಿಪುರದ ಇಂಫಾಲ್​ನಲ್ಲಿ ಎರಡು ಶವಗಳು ಪತ್ತೆಯಾಗಿವೆ. ಕಣ್ಣುಗಳಿಗೆ ಬಟ್ಟೆ ಕಟ್ಟಲಾಗಿತ್ತು, ಮೈತುಂಬಾ ಗಾಯದ ಗುರುತುಗಳು, ಕೈಗಳು ಕೂಡ ಕಟ್ಟಿದ್ದವು. ಇಬ್ಬರಲ್ಲಿ ಓರ್ವ ಮಹಿಳೆ ಕೂಡ ಇದ್ದಾರೆ. ಬುಧವಾರದಂದು ಇಂಫಾಲ್​ ಪಶ್ಚಿಮ ಜಿಲ್ಲೆಯ ತೈರೆನ್​ಪೋಕ್ಟಿ ಪ್ರದೇಶದ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯವಯಸ್ಕ ಮಹಿಳೆಯ ಶವ ಪತ್ತೆಯಾಗಿತ್ತು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ರಕ್ತಸಿಕ್ತ ಸ್ಥಿತಿಯಲ್ಲಿ ಎರಡು ಶವ ಪತ್ತೆ
ಪೊಲೀಸ್Image Credit source: Hindustan Times
ನಯನಾ ರಾಜೀವ್
|

Updated on: Nov 09, 2023 | 12:42 PM

Share

ಮಣಿಪುರದ ಇಂಫಾಲ್​ನಲ್ಲಿ ಎರಡು ಶವಗಳು ಪತ್ತೆಯಾಗಿವೆ. ಕಣ್ಣುಗಳಿಗೆ ಬಟ್ಟೆ ಕಟ್ಟಲಾಗಿತ್ತು, ಮೈತುಂಬಾ ಗಾಯದ ಗುರುತುಗಳು, ಕೈಗಳು ಕೂಡ ಕಟ್ಟಿದ್ದವು. ಇಬ್ಬರಲ್ಲಿ ಓರ್ವ ಮಹಿಳೆ ಕೂಡ ಇದ್ದಾರೆ. ಬುಧವಾರದಂದು ಇಂಫಾಲ್​ ಪಶ್ಚಿಮ ಜಿಲ್ಲೆಯ ತೈರೆನ್​ಪೋಕ್ಟಿ ಪ್ರದೇಶದ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯವಯಸ್ಕ ಮಹಿಳೆಯ ಶವ ಪತ್ತೆಯಾಗಿತ್ತು.

ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಇಂಫಾಲ್​ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದೆ. ಮಂಗಳವಾರ ತಡರಾತ್ರಿ ಇಂಫಾಲ್​ ಪೂರ್ವ ಜಿಲ್ಲೆಯ ತಖೋಕ್​ ಮಾಪಾಲ್ ಮಖಾ ಪ್ರದೇಶದಲ್ಲಿ ನಲವತ್ತರ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸ್ಥಳೀಯರು ಅಪರಿಚಿತ ವ್ಯಕ್ತಿಯ ಶವವನ್ನು ಹೊರ ತೆಗೆದಿದ್ದಾರೆ.

ಪೊಲೀಸರ ಪ್ರಕಾರ, ಮೃತ ವ್ಯಕ್ತಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು, ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿದ ಸ್ಥಿತಿಯಲ್ಲಿತ್ತು, ತಲೆಯ ಮೇಲೆ ಗುಂಡಿನ ಗಾಯಗಳಿದ್ದವು. ಎಫ್​ಐಆರ್​ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಮಂಗಳವಾರ ಕಾಂಗ್​ಚುಪ್​ನಲ್ಲಿ ಅಪರಿಚಿತ ಗುಂಡು ಹಾರಿಸಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ಮಹಿಳೆ ಸೇರಿದಂತೆ 9 ಮಂದಿಗೆ ಗುಂಡುಗಳು ತಗುಲಿವೆ.

ಮೇ ತಿಂಗಳಿನಲ್ಲಿ ಮೊದಲ ಬಾರಿಗೆ ಜನಾಂಗೀಯ ಘರ್ಷಣೆಗಳು ಸ್ಫೋಟಗೊಂಡಾಗಿನಿಂದ ಮಣಿಪುರದಲ್ಲಿ ಹಿಂಸಾಚಾರಗಳು ಹೆಚ್ಚಾಗಿವೆ. ಅಂದಿನಿಂದ ಇಲ್ಲಿಯವರೆಗೆ 180ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್