AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ