AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್