AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ