AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಾ-ಬಾಂಗ್ಲಾ ಗಡಿಯಲ್ಲಿ ದುರಂತ; ಪರಸ್ಪರ ಗುಂಡು ಹಾರಿಸಿಕೊಂಡು ಮೃತಪಟ್ಟ ಇಬ್ಬರು ಬಿಎಸ್​ಎಫ್ ಯೋಧರು

ಗುಂಡು ಹಾರಿಸಿಕೊಳ್ಳುವುದಕ್ಕೂ ಮೊದಲು ಇವರು ಜಗಳವಾಡಿಕೊಂಡಿದ್ದಾರೆ. ದೀರ್ಘ ಸಮಯದಿಂದಲೂ ಒಬ್ಬರಿಗೊಬ್ಬರು ಮಾತಿನ ಚಕಮಕಿ ನಡೆಸುತ್ತಲೇ ಇದ್ದರು. ಇವರಿಬ್ಬರಿಗೆ ಪೊಲೀಸರು ಸಮನ್ಸ್ ಕೂಡ ನೀಡಿದ್ದರು.

ಭಾರತಾ-ಬಾಂಗ್ಲಾ ಗಡಿಯಲ್ಲಿ ದುರಂತ; ಪರಸ್ಪರ ಗುಂಡು ಹಾರಿಸಿಕೊಂಡು ಮೃತಪಟ್ಟ ಇಬ್ಬರು ಬಿಎಸ್​ಎಫ್ ಯೋಧರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Mar 07, 2022 | 6:05 PM

Share

ಗಡಿ ಭದ್ರತಾ ಪಡೆಯ (BSF) ಇಬ್ಬರು ಯೋಧರು ಪರಸ್ಪರ ಶೂಟ್ ಮಾಡಿಕೊಂಡು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಬಾಂಗ್ಲಾದೇಶ-ಭಾರತ ಗಡಿ ಸಮೀಪ ಇಂದು ಮುಂಜಾನೆ 6.45ರ ಹೊತ್ತಿಗೆ ನಡೆದಿದೆ.  ಇವರು ಪಶ್ಚಿಮ ಬಂಗಾಳದ ಮುರ್ಶಿದಾಬಾದ್​ ಜಿಲ್ಲೆಯಲ್ಲಿರುವ ಕಕ್ಮರಿಚಾರ್ ಸೇನಾ ಶಿಬಿರದ ಬೆಟಾಲಿಯನ್ ಕ್ಯಾಂಪ್​ 177ರ ಯೋಧರಾಗಿದ್ದರು.  ಕೋಲ್ಕತ್ತದಿಂದ 230 ಕಿಮೀ ದೂರದಲ್ಲಿರುವ ಪ್ಯಾರಾ ಮಿಲಿಟರಿ ಪಡೆಯ ಬರ್ಹಾಂಪೋರ್ ವಲಯದಲ್ಲಿ ಈ ಶಿಬಿರವಿದೆ. ಹೀಗೆ ಗುಂಡು ಹಾರಿಸಿಕೊಂಡು ಮೃತಪಟ್ಟವರಿಬ್ಬರೂ ಗಡಿ ಭದ್ರತಾ ಪಡೆಯ ಹೆಡ್​ಕಾನ್​ಸ್ಟೆಬಲ್​ಗಳಾಗಿದ್ದು, ಒಬ್ಬರ ಹೆಸರು ಎಸ್​.ಎಸ್​.ಸೇಖರ್​ ಮತ್ತು ಇನ್ನೊಬ್ಬರು ಜಾನ್ಸನ್​ ಟೊಪ್ಪೊ ಎಂದು ಗುರುತಿಸಲಾಗಿದೆ. 

ಹೀಗೆ ಗುಂಡು ಹಾರಿಸಿಕೊಳ್ಳುವುದಕ್ಕೂ ಮೊದಲು ಇವರು ಜಗಳವಾಡಿಕೊಂಡಿದ್ದಾರೆ. ದೀರ್ಘ ಸಮಯದಿಂದಲೂ ಒಬ್ಬರಿಗೊಬ್ಬರು ಮಾತಿನ ಚಕಮಕಿ ನಡೆಸುತ್ತಲೇ ಇದ್ದರು. ಇವರಿಬ್ಬರಿಗೆ ಪೊಲೀಸರು ಸಮನ್ಸ್ ಕೂಡ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು.  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಸ್​ಎಫ್ ಡಿಐಜಿ ಎಸ್​ಎಸ್​ ಗುಲೇರಿಯಾ, ಇವರಿಬ್ಬರ ಮಧ್ಯೆ ಜಗಳಕ್ಕೆ ಕಾರಣ ಏನಿತ್ತು. ಪರಸ್ಪರ ಗುಂಡು ಹಾರಿಸಿಕೊಂಡಿದ್ದೇಕೆ ಎಂಬಿತ್ಯಾದಿ ವಿಚಾರಗಳನ್ನು ತನಿಖೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದಾರೆ.

ಬೆಳಗಾವಿ ಮೂಲದ ಯೋಧ ಸತ್ಯಪ್ಪ ಕಿಲಾರಗಿ (33) ತನ್ನ ಐವರು ಸಹಚರರ ಮೇಲೆ ಗುಂಡಿನ ದಾಳಿ ನಡೆಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ನಿನ್ನೆ ಪಂಜಾಬ್​​ನಲ್ಲಿ ನಡೆದಿತ್ತು. ಈ ದುರ್ಘಟನೆ ಬೆನ್ನಲ್ಲೇ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಬಿಎಸ್​ಎಫ್​ ಯೋಧರು ಪರಸ್ಪರ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.  ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಯೋಧ ಸತ್ಯಪ್ಪ ಕಳೆದ 13 ವರ್ಷಗಳ ಹಿಂದೆ BSF ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ವೈಯಕ್ತಿಕ ಸಾಲ ಹಾಗೂ ಕೌಟುಂಬಿಕ ವಿಚಾರಕ್ಕೆ ಮಾನಸಿಕವಾಗಿ ಖಿನ್ನರಾಗಿದ್ದ ಯೋಧ ಸತ್ಯಪ್ಪ, ನಿನ್ನೆ (ಮಾರ್ಚ್ 6) ಪಂಜಾಬ್​ನ ಅಮೃತಸರ ಅಟ್ಟಾರಿ ಗಡಿಯ ಖೇಸರ್ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಐವರು ಯೋಧರ ಮೇಲೆ ಗುಂಡು ತಗುಲಿದ್ದು ಬಳಿಕ ತಾನೂ ಸಹ ಗುಂಡು ಹಾರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಬೆಂಗಳೂರಿಗೆ ಓಡಿಬಂದಿರುವ ತಮಿಳುನಾಡು ಸಚಿವರೊಬ್ಬರ ಮಗಳಿಗೆ ಕರ್ನಾಟಕ ಸರ್ಕಾರದ ರಕ್ಷಣೆ ಬೇಕಂತೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!