AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಗವಾಗಿ ಸಾಗುತ್ತಿದೆ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ; ಶುರುವಾದ ವಾರದೊಳಗೆ ಕೊರೊನಾ ಲಸಿಕೆ ಪಡೆದವರ ಸಂಖ್ಯೆ 2 ಕೋಟಿ

ಕೊವಿನ್ ಆ್ಯಪ್​​ನಲ್ಲಿ ತೋರಿಸಲಾದ ಮಾಹಿತಿಯಂತೆ, ಜನವರಿ 1ರಿಂದ 7ರವರೆಗೆ, 15-17ವಯಸ್ಸಿನವರು ಒಟ್ಟು 20,226,790 ಮಂದಿ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಶುಕ್ರವಾರ ಒಟ್ಟಾರೆ ಕೊರೊನಾ ಲಸಿಕೆ ಅಭಿಯಾನ 150 ಕೋಟಿ ಗಡಿದಾಟಿದೆ.

ವೇಗವಾಗಿ ಸಾಗುತ್ತಿದೆ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ; ಶುರುವಾದ ವಾರದೊಳಗೆ ಕೊರೊನಾ ಲಸಿಕೆ ಪಡೆದವರ ಸಂಖ್ಯೆ 2 ಕೋಟಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 08, 2022 | 3:56 PM

Share

ದೇಶದಲ್ಲಿ ಜನವರಿ 3ರಿಂದ 15-17ವರ್ಷದವರಿಗೂ ಕೊವಿಡ್ 19 ಲಸಿಕೆ ನೀಡಲಾಗುತ್ತಿದೆ. ಈ ಮೂಲಕ ಕೊರೊನಾ ಲಸಿಕೆ ಅಭಿಯಾನವನ್ನು(Covid 19 Vaccination Drive) ಇನ್ನೊಂದು ಹಂತಕ್ಕೆ ವಿಸ್ತರಿಸಲಾಗಿದೆ. ಹಾಗೇ, ಹೊಸ ಹಂತದ ಕೊರೊನಾ ಲಸಿಕೆ ಅಭಿಯಾನ ಶುರುವಾದ ಒಂದು ವಾರದ ಒಳಗೆ, 15-17ವರ್ಷದವರು 2 ಕೋಟಿಗೂ ಅಧಿಕ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಮಕ್ಕಳ ವ್ಯಾಕ್ಸಿನೇಶನ್​ ಅಭಿಯಾನ ವೇಗವಾಗಿ ಮುಂದುವರಿಯುತ್ತಿದೆ. ನನ್ನ ಕಿರಿಯ ಸ್ನೇಹಿತರೇ, ಅದ್ಭುತವಾಗಿ ಸಾಥ್​ ಕೊಡುತ್ತಿದ್ದೀರಿ ಎಂದು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ, ಕೊವಿಡ್ 19 ಹೊಸ ಹಂತದ ಅಭಿಯಾನ ಶುರುವಾದ ವಾರದಲ್ಲಿ 2 ಕೋಟಿಗೂ ಅಧಿಕ ಮಕ್ಕಳು ಲಸಿಕೆ ಪಡೆದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕೊವಿನ್ ಆ್ಯಪ್​​ನಲ್ಲಿ ತೋರಿಸಲಾದ ಮಾಹಿತಿಯಂತೆ, ಜನವರಿ 1ರಿಂದ 7ರವರೆಗೆ, 15-17ವಯಸ್ಸಿನವರು ಒಟ್ಟು 20,226,790 ಮಂದಿ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಶುಕ್ರವಾರ ಒಟ್ಟಾರೆ ಕೊರೊನಾ ಲಸಿಕೆ ಅಭಿಯಾನ 150 ಕೋಟಿ ಗಡಿದಾಟಿದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ನಿನ್ನೆ ಕೋಲ್ಕತ್ತದಲ್ಲಿ ಚಿತ್ತರಂಜನ್​ ರಾಷ್ಟ್ರೀಯ ಕ್ಯಾನ್ಸರ್​ ಇನ್​ಸ್ಟಿಟ್ಯೂಟ್ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಇಂದು ದೇಶ ಕೊರೊನಾ ಲಸಿಕೆ ಅಭಿಯಾನದಲ್ಲಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿತು. ಈ ಹೊತ್ತಲ್ಲಿ ಕೊರೊನಾ ಲಸಿಕೆ ತಯಾರಕರು, ಕೇಂದ್ರ ಆರೋಗ್ಯ ಸಚಿವಾಲಯ, ವಿಜ್ಞಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

ಭಾರತದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನ 2021ರ ಜನವರಿಯಿಂದ ಶುರುವಾಗಿದೆ. ಇನ್ನೂ ಒಂದು ವರ್ಷ ಪೂರ್ತಿಯಾಗುವುದರ ಒಳಗೇ ದೇಶದಲ್ಲಿ ಕೊರೊನಾ ಲಸಿಕೆ 150 ಕೋಟಿ ಡೋಸ್ ನೀಡಲಾಗಿದೆ. ಹಾಗೇ, ಡಿಸೆಂಬರ್​ 26ರಂದು ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನವರಿ ಮೂರರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಮತ್ತು ಜನವರಿ 10ರಿಂದ ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಮತ್ತು 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಈಗ 15-18 ವರ್ಷದವರಿಗೆ ಕೊರೊನಾ ಲಸಿಕೆ ಅಭಿಯಾನ ಪ್ರಾರಂಭವಾಗಿದೆ.

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

Published On - 3:55 pm, Sat, 8 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ