Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

Blast in Ludhiana Court: ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ.

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
Follow us
TV9 Web
| Updated By: Lakshmi Hegde

Updated on:Dec 23, 2021 | 1:14 PM

ಲುಧಿಯಾನಾ: ಪಂಜಾಬ್​ನ ಲುಧಿಯಾನಾ ನಗರ (Ludhiana Court)ದಲ್ಲಿರುವ ನ್ಯಾಯಾಲಯವೊಂದರ ಸಂಕೀರ್ಣದಲ್ಲಿ ಇಂದು ಸ್ಫೋಟ ಉಂಟಾಗಿದ್ದು, ಮಹಿಳೆ ಸೇರಿ, ಇಬ್ಬರು ಮೃತಪಟ್ಟಿದ್ದಾರೆ. ಹಾಗೇ, ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.  ಕೋರ್ಟ್​ನ ಎರಡನೇ ಮಹಡಿಯಲ್ಲಿ ಸ್ಫೋಟವಾಗಿದೆ. ಹಾಗೇ, ಕೆಳಗೆ ವಾಹನ ನಿಲುಗಡೆ ಜಾಗವೂ ಧ್ವಂಸಗೊಂಡಿದೆ. ಅಲ್ಲಿ ಹಾಕಿದ್ದ ಇಟ್ಟಿಗೆ, ಕಬ್ಬಿಣದ ಕಂಬಗಳು ಬಿದ್ದಿವೆ ಎಂದು ವರದಿಯಾಗಿದೆ. ಅಂದಹಾಗೆ, ಇದು ಆರು ಮಹಡಿಗಳ ಕಟ್ಟಡವಾಗಿದ್ದು, ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟ (Blast in Ludhiana Court) ವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ. ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಅಪಾರ ಜನರು ಸೇರಿದ್ದಾರೆ. ಕಟ್ಟಡದಿಂದ ಹೊಗೆ ಬರುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೊಂದು ಪ್ರಬಲ ಸ್ಫೋಟವಾಗಿದ್ದು, ಸ್ಫೋಟದ ರಭಸಕ್ಕೆ ಇಡೀ ಕಟ್ಟಡ ನಲುಗಿದೆ ಎಂದು ಹೇಳಲಾಗಿದೆ.

ಕೆಲವು ದಿನಗಳ ಹಿಂದೆ, ಅಂದರೆ ಡಿಸೆಂಬರ್​ 9ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಸಣ್ಣ ಸ್ಫೋಟ ಸಂಭವಿಸಿದೆ. ಆದರೆ, ಈ ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದೆ. ಕೋರ್ಟ್​ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸದ್ಯ ಈ ಪ್ರಕರಣದ ಆರೋಪಿ  ಡಿಆರ್​ಡಿಒ ವಿಜ್ಞಾನಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತಮ್ಮ ನೆರೆಮನೆಯ ವಕೀಲರೊಬ್ಬರ ಮೇಲಿನ ಸೇಡಿಗೆ, ಕೋರ್ಟ್ ಆವರಣದಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದರು. ಸದ್ಯ ಅವರು ಜೈಲಿನಲ್ಲಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿಯೇ ಹ್ಯಾಂಡ್ ವಾಶ್​ ದ್ರವ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಂದಿರ-ಮಸೀದಿ ವಿವಾದ ಬಗೆಹರಿಯುತ್ತಿದ್ದಂತೆ ಶುರುವಾಯ್ತು ಭೂಮಿ ಖರೀದಿ ಹಗರಣ, ತನಿಖೆಗೆ ಆದೇಶಿಸಿದ ಆದಿತ್ಯನಾಥ ಸರ್ಕಾರ

Published On - 1:02 pm, Thu, 23 December 21

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್