AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

Blast in Ludhiana Court: ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ.

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
TV9 Web
| Edited By: |

Updated on:Dec 23, 2021 | 1:14 PM

Share

ಲುಧಿಯಾನಾ: ಪಂಜಾಬ್​ನ ಲುಧಿಯಾನಾ ನಗರ (Ludhiana Court)ದಲ್ಲಿರುವ ನ್ಯಾಯಾಲಯವೊಂದರ ಸಂಕೀರ್ಣದಲ್ಲಿ ಇಂದು ಸ್ಫೋಟ ಉಂಟಾಗಿದ್ದು, ಮಹಿಳೆ ಸೇರಿ, ಇಬ್ಬರು ಮೃತಪಟ್ಟಿದ್ದಾರೆ. ಹಾಗೇ, ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.  ಕೋರ್ಟ್​ನ ಎರಡನೇ ಮಹಡಿಯಲ್ಲಿ ಸ್ಫೋಟವಾಗಿದೆ. ಹಾಗೇ, ಕೆಳಗೆ ವಾಹನ ನಿಲುಗಡೆ ಜಾಗವೂ ಧ್ವಂಸಗೊಂಡಿದೆ. ಅಲ್ಲಿ ಹಾಕಿದ್ದ ಇಟ್ಟಿಗೆ, ಕಬ್ಬಿಣದ ಕಂಬಗಳು ಬಿದ್ದಿವೆ ಎಂದು ವರದಿಯಾಗಿದೆ. ಅಂದಹಾಗೆ, ಇದು ಆರು ಮಹಡಿಗಳ ಕಟ್ಟಡವಾಗಿದ್ದು, ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟ (Blast in Ludhiana Court) ವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ. ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಅಪಾರ ಜನರು ಸೇರಿದ್ದಾರೆ. ಕಟ್ಟಡದಿಂದ ಹೊಗೆ ಬರುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೊಂದು ಪ್ರಬಲ ಸ್ಫೋಟವಾಗಿದ್ದು, ಸ್ಫೋಟದ ರಭಸಕ್ಕೆ ಇಡೀ ಕಟ್ಟಡ ನಲುಗಿದೆ ಎಂದು ಹೇಳಲಾಗಿದೆ.

ಕೆಲವು ದಿನಗಳ ಹಿಂದೆ, ಅಂದರೆ ಡಿಸೆಂಬರ್​ 9ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಸಣ್ಣ ಸ್ಫೋಟ ಸಂಭವಿಸಿದೆ. ಆದರೆ, ಈ ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದೆ. ಕೋರ್ಟ್​ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸದ್ಯ ಈ ಪ್ರಕರಣದ ಆರೋಪಿ  ಡಿಆರ್​ಡಿಒ ವಿಜ್ಞಾನಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತಮ್ಮ ನೆರೆಮನೆಯ ವಕೀಲರೊಬ್ಬರ ಮೇಲಿನ ಸೇಡಿಗೆ, ಕೋರ್ಟ್ ಆವರಣದಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದರು. ಸದ್ಯ ಅವರು ಜೈಲಿನಲ್ಲಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿಯೇ ಹ್ಯಾಂಡ್ ವಾಶ್​ ದ್ರವ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಂದಿರ-ಮಸೀದಿ ವಿವಾದ ಬಗೆಹರಿಯುತ್ತಿದ್ದಂತೆ ಶುರುವಾಯ್ತು ಭೂಮಿ ಖರೀದಿ ಹಗರಣ, ತನಿಖೆಗೆ ಆದೇಶಿಸಿದ ಆದಿತ್ಯನಾಥ ಸರ್ಕಾರ

Published On - 1:02 pm, Thu, 23 December 21

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ