ಗಣೇಶ ಮೂರ್ತಿ ವಿಸರ್ಜನೆ ವೇಳೆ ಇಬ್ಬರು ಬಾಲಕರು ನೀರುಪಾಲು

ಗಣೇಶ ಮೂರ್ತಿ ವಿಸರ್ಜನೆ ಮಾಡಲು ಹೋದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ತಮಿಳುನಾಡಿನ ಸೂಳಗಿರಿ ಸಮೀಪದ ಅನಾಸಂದ್ರಂ ಕೆರೆಯಲ್ಲಿ ನೆಡೆದಿದೆ. ಸೂಳಗಿರಿ ವಾಸಿಗಳಾದ ಭೂಪತಿ(12) ಮತ್ತು ಮುರಳಿ(12) ಮೃತ ಬಾಲಕರಾಗಿದ್ದಾರೆ. ಗಣೇಶ ಚತುರ್ಥಿ ಅಂಗವಾಗಿ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ ಬಾಲಕರು, ಮೂರು ದಿನದ ಬಳಿಕ ಇಂದು ಸ್ನೇಹಿತರೊಂದಿಗೆ ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲು ಹೋಗಿದ್ದರು. ಈ ವೇಳೆ ನೀರಿನ ಆಳ ಅರಿಯದೇ ಗಣೇಶ ವಿಸರ್ಜನೆಗೆ ಇಳಿದಿದ್ದ ಬಾಲಕರು, ನೋಡ ನೋಡುತ್ತಿದ್ದಂತೆ ಗಣೇಶ ಮೂರ್ತಿ ಜೊತೆ ಇಬ್ಬರು […]

ಗಣೇಶ ಮೂರ್ತಿ ವಿಸರ್ಜನೆ ವೇಳೆ ಇಬ್ಬರು ಬಾಲಕರು ನೀರುಪಾಲು

Updated on: Aug 25, 2020 | 4:56 PM

ಗಣೇಶ ಮೂರ್ತಿ ವಿಸರ್ಜನೆ ಮಾಡಲು ಹೋದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ತಮಿಳುನಾಡಿನ ಸೂಳಗಿರಿ ಸಮೀಪದ ಅನಾಸಂದ್ರಂ ಕೆರೆಯಲ್ಲಿ ನೆಡೆದಿದೆ.

ಸೂಳಗಿರಿ ವಾಸಿಗಳಾದ ಭೂಪತಿ(12) ಮತ್ತು ಮುರಳಿ(12) ಮೃತ ಬಾಲಕರಾಗಿದ್ದಾರೆ. ಗಣೇಶ ಚತುರ್ಥಿ ಅಂಗವಾಗಿ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ ಬಾಲಕರು, ಮೂರು ದಿನದ ಬಳಿಕ ಇಂದು ಸ್ನೇಹಿತರೊಂದಿಗೆ ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲು ಹೋಗಿದ್ದರು.

ಈ ವೇಳೆ ನೀರಿನ ಆಳ ಅರಿಯದೇ ಗಣೇಶ ವಿಸರ್ಜನೆಗೆ ಇಳಿದಿದ್ದ ಬಾಲಕರು, ನೋಡ ನೋಡುತ್ತಿದ್ದಂತೆ ಗಣೇಶ ಮೂರ್ತಿ ಜೊತೆ ಇಬ್ಬರು ನೀರುಪಾಲಾಗಿದ್ದಾರೆ. ಸದ್ಯ ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸ್ಥಳಕ್ಕಾಗಮಿಸಿದ ಸೂಳಗಿರಿ ಪೊಲೀಸರು, ಸ್ಥಳೀಯರ ನೆರವಿನಿಂದ ಮೃತ ದೇಹಗಳನ್ನು ಹೊರ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 4:55 pm, Tue, 25 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us