ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು ಭಕ್ತರು ಸೇರಿ ಅನೇಕರಿಗೆ ಗಾಯ

ಹೈದರಾಬಾದ್: ಎರಡು ಖಾಸಗಿ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 25 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಪೂತಲಪಟ್ಟು ನಾಯ್ಡುಪೇಟ ಪ್ರಧಾನ ರಹದಾರಿಯಲ್ಲಿನ‌ ಕಾಸಿಪಂಟ್ಲ ಹೆರಿಟೇಜ್ ಬಳಿ ನಡೆದಿದೆ. ವಿಜಯವಾಡದಿಂದ ಕುಪ್ಪಂಗೆ ಹೊರಟಿದ್ದ ವೋಲ್ವೋ ಬಸ್​ಗೆ ಶಬರಿ‌ಮಲೈನಿಂದ -ತೆಲಂಗಾಣದ ನಲಗೊಂಡಗೆ‌ ಹೋಗುತ್ತಿದ್ದ ಇನ್ನೊಂದು ಖಾಸಗಿ ಬಸ್ ಡಿಕ್ಕಿಯಾಗಿದೆ. ಇದರ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಹಾಗೂ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ತಿರುಪತಿಯ ರುಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಆಂಧ್ರಪ್ರದೇಶದ ರಮೇಶ್ ಹಾಗೂ ಪ್ರಸಾದ್ […]

ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು ಭಕ್ತರು ಸೇರಿ ಅನೇಕರಿಗೆ ಗಾಯ
ಸಾಧು ಶ್ರೀನಾಥ್​

Updated on: Jan 08, 2020 | 9:32 AM

ಹೈದರಾಬಾದ್: ಎರಡು ಖಾಸಗಿ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 25 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಪೂತಲಪಟ್ಟು ನಾಯ್ಡುಪೇಟ ಪ್ರಧಾನ ರಹದಾರಿಯಲ್ಲಿನ‌ ಕಾಸಿಪಂಟ್ಲ ಹೆರಿಟೇಜ್ ಬಳಿ ನಡೆದಿದೆ.

ವಿಜಯವಾಡದಿಂದ ಕುಪ್ಪಂಗೆ ಹೊರಟಿದ್ದ ವೋಲ್ವೋ ಬಸ್​ಗೆ ಶಬರಿ‌ಮಲೈನಿಂದ -ತೆಲಂಗಾಣದ ನಲಗೊಂಡಗೆ‌ ಹೋಗುತ್ತಿದ್ದ ಇನ್ನೊಂದು ಖಾಸಗಿ ಬಸ್ ಡಿಕ್ಕಿಯಾಗಿದೆ. ಇದರ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಹಾಗೂ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ತಿರುಪತಿಯ ರುಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಆಂಧ್ರಪ್ರದೇಶದ ರಮೇಶ್ ಹಾಗೂ ಪ್ರಸಾದ್ ಎಂದು ಗುರುತಿಸಲಾಗಿದ್ದು, ರಮೇಶ್ ಚಾಲಕನಾಗಿದ್ದ, ಪ್ರಸಾದ್ ವೋಲ್ವೋ ಬಸ್ ಅಟೆಂಡರ್ ಎಂದು ತಿಳಿದು ಬಂದಿದೆ.

Published On - 9:30 am, Wed, 8 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us