AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಝಾನ್ಸಿ ಬಳಿ ಟ್ಯಾಂಕರ್​ನ ಬ್ಯಾರೆಲ್ ಸ್ಫೋಟ; ಇಬ್ಬರು ಯೋಧರು ಸಾವು, ಒಬ್ಬರಿಗೆ ಗಾಯ

ಬ್ಯಾರೆಲ್ ಸ್ಫೋಟದಿಂದಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಮಾಂಡರ್ ಮತ್ತು ಗನ್ನರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿ ಬಳಿ ಟ್ಯಾಂಕರ್​ನ ಬ್ಯಾರೆಲ್ ಸ್ಫೋಟ; ಇಬ್ಬರು ಯೋಧರು ಸಾವು, ಒಬ್ಬರಿಗೆ ಗಾಯ
ಬ್ಯಾರೆಲ್ ಸ್ಫೋಟಗೊಂಡಿಬ್ಬರು ಭಾರತೀಯ ಯೋಧರು
TV9 Web
| Edited By: |

Updated on: Oct 07, 2022 | 8:06 PM

Share

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಝಾನ್ಸಿ ಬಳಿ ಫೀಲ್ಡ್​ ಫೈರಿಂಗ್ ತರಬೇತಿ ವೇಳೆ ಟಿ-90 ಟ್ಯಾಂಕರ್​ನ ಬ್ಯಾರೆಲ್ ಸ್ಫೋಟಗೊಂಡ ಪರಿಣಾಮ ಭಾರತೀಯ ಸೇನೆಯ (Indian Army) ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅ. 6ರಂದು ಬಾಬಿನಾ ಫೀಲ್ಡ್ ಫೈರಿಂಗ್ ರೇಂಜ್‌ಗಳಲ್ಲಿ ವಾರ್ಷಿಕ ಗುಂಡಿನ ದಾಳಿಯ ಪರೀಕ್ಷಾ ಸಮಯದಲ್ಲಿ ಟ್ಯಾಂಕ್ ಬ್ಯಾರೆಲ್ ಸ್ಫೋಟಗೊಂಡಿದೆ.

ಈ ಟ್ಯಾಂಕರ್ ಅನ್ನು ಮೂವರು ಸಿಬ್ಬಂದಿ ನಿರ್ವಹಿಸುತ್ತಿದ್ದರು. ಎಲ್ಲಾ ಸಿಬ್ಬಂದಿಗೆ ತಕ್ಷಣವೇ ವೈದ್ಯಕೀಯ ತುರ್ತು ಚಿಕಿತ್ಸೆ ನೀಡಿ ಬಬಿನಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬ್ಯಾರೆಲ್ ಸ್ಫೋಟದಿಂದಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಮಾಂಡರ್ ಮತ್ತು ಗನ್ನರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಕುರಿತು ಸೇನೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

ಟ್ಯಾಂಕರ್​ನ ಬ್ಯಾರೆಲ್ ಸ್ಫೋಟಗೊಳ್ಳುತ್ತಿದ್ದಂತೆ ಮೂವರನ್ನೂ ತಕ್ಷಣ ಬಬಿನಾದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಟ್ಯಾಂಕ್‌ನ ಕಮಾಂಡರ್ ಮತ್ತು ಗನ್ನರ್ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದ್ದು, ಚಾಲಕನಾಗಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಸೈನಿಕರನ್ನು ರಾಜಸ್ಥಾನದ ಸುಮೇರ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಸುಕಾಂತ ಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಉತ್ತರ ಪ್ರದೇಶದ ಖಲೀಲಾಬಾದ್‌ನ ಪ್ರದೀಪ್ ಸಿಂಗ್ ಯಾದವ್ ಅವರನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಸ್ಫೋಟದಲ್ಲಿ ಸಾವನ್ನಪ್ಪಿದ ಇಬ್ಬರು ಸಿಬ್ಬಂದಿಗಳ ಕುಟುಂಬಗಳಿಗೆ ಸೇನೆಯು ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ