AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕುಸಿದು ಬಿದ್ದ ಗೋಡೆ
TV9 Web
| Edited By: |

Updated on:Apr 26, 2022 | 9:39 AM

Share

ದೆಹಲಿಯ ವಾಯುವ್ಯ ಭಾಗದಲ್ಲಿರುವ ಕೇಶವಪುರಂನ ಲಾರೆನ್ಸ್​ ಪ್ರದೇಶದಲ್ಲಿ ಫ್ಲಾಟ್​ವೊಂದರ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಇದು ಎರಡನೇ ಗೋಡೆ ಕುಸಿತದ ಅವಘಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11ಗಂಟೆ ಹೊತ್ತಿಗೆ ಗೋಡೆ ಕುಸಿದಿದ್ದು, ಇದರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ದೀಪ್​ ಚಾಂದ್​ ಬಂಧು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಲ್ಲಿಗೆ ಹೋಗುವಷ್ಟೆಲ್ಲಿ ಮೃತಪಟ್ಟಿದ್ದರು ಎಂದೂ ಮಾಹಿತಿ ನೀಡಿದ್ದಾರೆ. 

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಯಲ್ಲಿ ಸ್ಕೂಟರ್​​ವೊಂದು ಪೂರ್ತಿಯಾಗಿ ಜಖಂ ಆಗಿದೆ. ಸದ್ಯ ಅವಶೇಷಗಳನ್ನೆಲ್ಲ ತೆರವು ಮಾಡಲಾಗುತ್ತಿದ್ದು, ಪೊಲೀಸರು ಫ್ಲಾಟ್​ ಮಾಲೀಕನ ವಿರುದ್ಧ ಕೇಸ್​ ದಾಖಲು ಮಾಡಿದ್ದಾರೆ.   ಸೋಮವಾರ ಮಧ್ಯಾಹ್ನ ನೈಋತ್ಯ ದೆಹಲಿಯ ಸತ್ಯ ನಿಕೇತನ್​ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಗಾಯಗೊಂಡು, ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ದಿನದೊಳಗೆ ಮತ್ತೊಂದು ಘಟನೆ ನಡೆದಿದೆ.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

Published On - 9:38 am, Tue, 26 April 22

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ