AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕುಸಿದು ಬಿದ್ದ ಗೋಡೆ
Follow us
TV9 Web
| Updated By: Lakshmi Hegde

Updated on:Apr 26, 2022 | 9:39 AM

ದೆಹಲಿಯ ವಾಯುವ್ಯ ಭಾಗದಲ್ಲಿರುವ ಕೇಶವಪುರಂನ ಲಾರೆನ್ಸ್​ ಪ್ರದೇಶದಲ್ಲಿ ಫ್ಲಾಟ್​ವೊಂದರ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಇದು ಎರಡನೇ ಗೋಡೆ ಕುಸಿತದ ಅವಘಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11ಗಂಟೆ ಹೊತ್ತಿಗೆ ಗೋಡೆ ಕುಸಿದಿದ್ದು, ಇದರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ದೀಪ್​ ಚಾಂದ್​ ಬಂಧು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಲ್ಲಿಗೆ ಹೋಗುವಷ್ಟೆಲ್ಲಿ ಮೃತಪಟ್ಟಿದ್ದರು ಎಂದೂ ಮಾಹಿತಿ ನೀಡಿದ್ದಾರೆ. 

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಯಲ್ಲಿ ಸ್ಕೂಟರ್​​ವೊಂದು ಪೂರ್ತಿಯಾಗಿ ಜಖಂ ಆಗಿದೆ. ಸದ್ಯ ಅವಶೇಷಗಳನ್ನೆಲ್ಲ ತೆರವು ಮಾಡಲಾಗುತ್ತಿದ್ದು, ಪೊಲೀಸರು ಫ್ಲಾಟ್​ ಮಾಲೀಕನ ವಿರುದ್ಧ ಕೇಸ್​ ದಾಖಲು ಮಾಡಿದ್ದಾರೆ.   ಸೋಮವಾರ ಮಧ್ಯಾಹ್ನ ನೈಋತ್ಯ ದೆಹಲಿಯ ಸತ್ಯ ನಿಕೇತನ್​ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಗಾಯಗೊಂಡು, ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ದಿನದೊಳಗೆ ಮತ್ತೊಂದು ಘಟನೆ ನಡೆದಿದೆ.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

Published On - 9:38 am, Tue, 26 April 22

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್