AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕುಸಿದು ಬಿದ್ದ ಗೋಡೆ
TV9 Web
| Edited By: |

Updated on:Apr 26, 2022 | 9:39 AM

Share

ದೆಹಲಿಯ ವಾಯುವ್ಯ ಭಾಗದಲ್ಲಿರುವ ಕೇಶವಪುರಂನ ಲಾರೆನ್ಸ್​ ಪ್ರದೇಶದಲ್ಲಿ ಫ್ಲಾಟ್​ವೊಂದರ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಇದು ಎರಡನೇ ಗೋಡೆ ಕುಸಿತದ ಅವಘಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11ಗಂಟೆ ಹೊತ್ತಿಗೆ ಗೋಡೆ ಕುಸಿದಿದ್ದು, ಇದರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ದೀಪ್​ ಚಾಂದ್​ ಬಂಧು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಲ್ಲಿಗೆ ಹೋಗುವಷ್ಟೆಲ್ಲಿ ಮೃತಪಟ್ಟಿದ್ದರು ಎಂದೂ ಮಾಹಿತಿ ನೀಡಿದ್ದಾರೆ. 

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಯಲ್ಲಿ ಸ್ಕೂಟರ್​​ವೊಂದು ಪೂರ್ತಿಯಾಗಿ ಜಖಂ ಆಗಿದೆ. ಸದ್ಯ ಅವಶೇಷಗಳನ್ನೆಲ್ಲ ತೆರವು ಮಾಡಲಾಗುತ್ತಿದ್ದು, ಪೊಲೀಸರು ಫ್ಲಾಟ್​ ಮಾಲೀಕನ ವಿರುದ್ಧ ಕೇಸ್​ ದಾಖಲು ಮಾಡಿದ್ದಾರೆ.   ಸೋಮವಾರ ಮಧ್ಯಾಹ್ನ ನೈಋತ್ಯ ದೆಹಲಿಯ ಸತ್ಯ ನಿಕೇತನ್​ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಗಾಯಗೊಂಡು, ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ದಿನದೊಳಗೆ ಮತ್ತೊಂದು ಘಟನೆ ನಡೆದಿದೆ.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

Published On - 9:38 am, Tue, 26 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!