AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

24ಗಂಟೆಯಲ್ಲಿ ಎರಡನೇ ಅವಘಡ: ಗೋಡೆ ಕುಸಿದು ಇಬ್ಬರು ಸಾವು, ಫ್ಲಾಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕುಸಿದು ಬಿದ್ದ ಗೋಡೆ
TV9 Web
| Edited By: |

Updated on:Apr 26, 2022 | 9:39 AM

Share

ದೆಹಲಿಯ ವಾಯುವ್ಯ ಭಾಗದಲ್ಲಿರುವ ಕೇಶವಪುರಂನ ಲಾರೆನ್ಸ್​ ಪ್ರದೇಶದಲ್ಲಿ ಫ್ಲಾಟ್​ವೊಂದರ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಇದು ಎರಡನೇ ಗೋಡೆ ಕುಸಿತದ ಅವಘಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11ಗಂಟೆ ಹೊತ್ತಿಗೆ ಗೋಡೆ ಕುಸಿದಿದ್ದು, ಇದರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ದೀಪ್​ ಚಾಂದ್​ ಬಂಧು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಲ್ಲಿಗೆ ಹೋಗುವಷ್ಟೆಲ್ಲಿ ಮೃತಪಟ್ಟಿದ್ದರು ಎಂದೂ ಮಾಹಿತಿ ನೀಡಿದ್ದಾರೆ. 

ಮೃತರಲ್ಲಿ ಒಬ್ಬನ ಹೆಸರು ಸುಮಿತ್ ಕುಮಾರ್​ (42). ಇವರು ಆನಂದ್​ ಪರ್ಬತ್​ ನಿವಾಸಿ. ಹಾಗೇ ಇನ್ನೊಬ್ಬರ ಹೆಸರು, ವಿಳಾಸ ಇನ್ನೂ ಗೊತ್ತಾಗಿಲ್ಲ. ಗೋಡೆ ಬಿದ್ದ ಜಾಗದಲ್ಲಿ ಸರಿಯಾಗಿ ಪರಿಶೀಲನೆ ನಡೆಸಲಾಗಿದೆ. ಇವರಿಬ್ಬರನ್ನು ಬಿಟ್ಟರೆ ಇನ್ಯಾರೂ ಅಲ್ಲಿ ಸಿಲುಕಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಯಲ್ಲಿ ಸ್ಕೂಟರ್​​ವೊಂದು ಪೂರ್ತಿಯಾಗಿ ಜಖಂ ಆಗಿದೆ. ಸದ್ಯ ಅವಶೇಷಗಳನ್ನೆಲ್ಲ ತೆರವು ಮಾಡಲಾಗುತ್ತಿದ್ದು, ಪೊಲೀಸರು ಫ್ಲಾಟ್​ ಮಾಲೀಕನ ವಿರುದ್ಧ ಕೇಸ್​ ದಾಖಲು ಮಾಡಿದ್ದಾರೆ.   ಸೋಮವಾರ ಮಧ್ಯಾಹ್ನ ನೈಋತ್ಯ ದೆಹಲಿಯ ಸತ್ಯ ನಿಕೇತನ್​ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಗಾಯಗೊಂಡು, ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ದಿನದೊಳಗೆ ಮತ್ತೊಂದು ಘಟನೆ ನಡೆದಿದೆ.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

Published On - 9:38 am, Tue, 26 April 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ