AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..

ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಕೌರ್​ ಆರೋಪಿಸಿದ್ದರು.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..
ನವನೀತ್​ ಕೌರ್​ ರಾಣಾ
TV9 Web
| Updated By: Lakshmi Hegde|

Updated on:Jun 08, 2021 | 4:32 PM

Share

ಮುಂಬೈ: ಮಹಾರಾಷ್ಟ್ರದ ಸಂಸದೆ ನವನೀತ್​ ಕೌರ್​​ ರಾಣಾರಿಗೆ ಬಾಂಬೆ ಹೈಕೋರ್ಟ್​ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ನವನೀತ್​ ಕೌರ್​ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಗಿದೆ. ನವನೀತ್​ ಕೌರಾ ಅಮರಾವತಿಯ ಸಂಸದೆಯಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೇ ಮೊದಲಬಾರಿಗೆ ಸಂಸದೆಯಾಗಿದ್ದ ಅವರೀಗ ತಮ್ಮ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಆದರೆ ಕೋರ್ಟ್​ ಸದ್ಯ 2 ಲಕ್ಷ ರೂಪಾಯಿ ದಂಡವನ್ನು ಮಾತ್ರ ವಿಧಿಸಿದ್ದು, ನವನೀತ್​ ಹುದ್ದೆಯ ಬಗ್ಗೆ ಮೌನ ವಹಿಸಿದೆ.

ವಿದರ್ಭದ ಅತಿದೊಡ್ಡ ಪ್ರದೇಶವಾದ ಅಮರಾವತಿಯ ಸಂಸದೆಯಾಗಿರುವ ಕೌರ್​ಗೆ ಈಗ 35 ವರ್ಷ. 7 ಭಾಷೆಗಳನ್ನು ಮಾತನಾಡುತ್ತಾರೆ. ಮಹಾರಾಷ್ಟ್ರದ ಎಂಟು ಮಹಿಳಾ ಜನಪ್ರತಿನಿಧಿಗಳಲ್ಲಿ ಇವರೂ ಒಬ್ಬರು. ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ. ನಾನು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ನವನೀತ್ ಕೌರ್​ ಆರೋಪಿಸಿದ್ದರು. ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂಬಿರ್ಲಾರಿಗೂ ದೂರು ನೀಡಿದ್ದರು.

ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿಯಾಗಿದ್ದ ಸಚಿನ್​ ವಾಝೆ ಅಮಾನತಿನ ಬಗ್ಗೆ ಕೌರ್​ ಲೋಕಸಭೆಯಲ್ಲಿ ಮಾತನಾಡಿದ್ದರು. ಮುಕೇಶ್ ಅಂಬಾನಿ ಮನೆ ಮುಂದೆ ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಅಧಿಕಾರಿಯನ್ನು ಅಮಾನತು ಮಾಡಿ, ಅರೆಸ್ಟ್ ಮಾಡಲಾಗಿತ್ತು. ಅದರ ಬಗ್ಗೆ ಮಾತನಾಡಿದ್ದ ಕೌರ್​, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಅವರ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದೂ ಆಗ್ರಹಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

Published On - 4:27 pm, Tue, 8 June 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ