AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..

ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಕೌರ್​ ಆರೋಪಿಸಿದ್ದರು.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..
ನವನೀತ್​ ಕೌರ್​ ರಾಣಾ
TV9 Web
| Edited By: |

Updated on:Jun 08, 2021 | 4:32 PM

Share

ಮುಂಬೈ: ಮಹಾರಾಷ್ಟ್ರದ ಸಂಸದೆ ನವನೀತ್​ ಕೌರ್​​ ರಾಣಾರಿಗೆ ಬಾಂಬೆ ಹೈಕೋರ್ಟ್​ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ನವನೀತ್​ ಕೌರ್​ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಗಿದೆ. ನವನೀತ್​ ಕೌರಾ ಅಮರಾವತಿಯ ಸಂಸದೆಯಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೇ ಮೊದಲಬಾರಿಗೆ ಸಂಸದೆಯಾಗಿದ್ದ ಅವರೀಗ ತಮ್ಮ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಆದರೆ ಕೋರ್ಟ್​ ಸದ್ಯ 2 ಲಕ್ಷ ರೂಪಾಯಿ ದಂಡವನ್ನು ಮಾತ್ರ ವಿಧಿಸಿದ್ದು, ನವನೀತ್​ ಹುದ್ದೆಯ ಬಗ್ಗೆ ಮೌನ ವಹಿಸಿದೆ.

ವಿದರ್ಭದ ಅತಿದೊಡ್ಡ ಪ್ರದೇಶವಾದ ಅಮರಾವತಿಯ ಸಂಸದೆಯಾಗಿರುವ ಕೌರ್​ಗೆ ಈಗ 35 ವರ್ಷ. 7 ಭಾಷೆಗಳನ್ನು ಮಾತನಾಡುತ್ತಾರೆ. ಮಹಾರಾಷ್ಟ್ರದ ಎಂಟು ಮಹಿಳಾ ಜನಪ್ರತಿನಿಧಿಗಳಲ್ಲಿ ಇವರೂ ಒಬ್ಬರು. ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ. ನಾನು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ನವನೀತ್ ಕೌರ್​ ಆರೋಪಿಸಿದ್ದರು. ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂಬಿರ್ಲಾರಿಗೂ ದೂರು ನೀಡಿದ್ದರು.

ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿಯಾಗಿದ್ದ ಸಚಿನ್​ ವಾಝೆ ಅಮಾನತಿನ ಬಗ್ಗೆ ಕೌರ್​ ಲೋಕಸಭೆಯಲ್ಲಿ ಮಾತನಾಡಿದ್ದರು. ಮುಕೇಶ್ ಅಂಬಾನಿ ಮನೆ ಮುಂದೆ ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಅಧಿಕಾರಿಯನ್ನು ಅಮಾನತು ಮಾಡಿ, ಅರೆಸ್ಟ್ ಮಾಡಲಾಗಿತ್ತು. ಅದರ ಬಗ್ಗೆ ಮಾತನಾಡಿದ್ದ ಕೌರ್​, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಅವರ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದೂ ಆಗ್ರಹಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

Published On - 4:27 pm, Tue, 8 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!