AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..

ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಕೌರ್​ ಆರೋಪಿಸಿದ್ದರು.

ಸ್ವತಂತ್ರವಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ನವನೀತ್​ ಕೌರ್​ಗೆ ಬಾಂಬೆ ಹೈಕೋರ್ಟ್​​ನಿಂದ 2 ಲಕ್ಷ ರೂ.ದಂಡ..
ನವನೀತ್​ ಕೌರ್​ ರಾಣಾ
TV9 Web
| Edited By: |

Updated on:Jun 08, 2021 | 4:32 PM

Share

ಮುಂಬೈ: ಮಹಾರಾಷ್ಟ್ರದ ಸಂಸದೆ ನವನೀತ್​ ಕೌರ್​​ ರಾಣಾರಿಗೆ ಬಾಂಬೆ ಹೈಕೋರ್ಟ್​ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ನವನೀತ್​ ಕೌರ್​ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಗಿದೆ. ನವನೀತ್​ ಕೌರಾ ಅಮರಾವತಿಯ ಸಂಸದೆಯಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೇ ಮೊದಲಬಾರಿಗೆ ಸಂಸದೆಯಾಗಿದ್ದ ಅವರೀಗ ತಮ್ಮ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಆದರೆ ಕೋರ್ಟ್​ ಸದ್ಯ 2 ಲಕ್ಷ ರೂಪಾಯಿ ದಂಡವನ್ನು ಮಾತ್ರ ವಿಧಿಸಿದ್ದು, ನವನೀತ್​ ಹುದ್ದೆಯ ಬಗ್ಗೆ ಮೌನ ವಹಿಸಿದೆ.

ವಿದರ್ಭದ ಅತಿದೊಡ್ಡ ಪ್ರದೇಶವಾದ ಅಮರಾವತಿಯ ಸಂಸದೆಯಾಗಿರುವ ಕೌರ್​ಗೆ ಈಗ 35 ವರ್ಷ. 7 ಭಾಷೆಗಳನ್ನು ಮಾತನಾಡುತ್ತಾರೆ. ಮಹಾರಾಷ್ಟ್ರದ ಎಂಟು ಮಹಿಳಾ ಜನಪ್ರತಿನಿಧಿಗಳಲ್ಲಿ ಇವರೂ ಒಬ್ಬರು. ಇದೇ ವರ್ಷ ಮಾರ್ಚ್​ನಲ್ಲಿ ಕೌರ್​ ಹಾಗೂ ಶಿವಸೇನೆ ಸಂಸದ ಅರವಿಂದ್​ ಸಾವಂತ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅರವಿಂದ್ ಸಾವಂತ್​ ಅವರು ದೆಹಲಿಯ ಲೋಕಸಭೆ ಮೊಗಸಾಲೆಯಲ್ಲಿಯೇ ನಿಂತು ನನಗೆ ಬೆದರಿಕೆ ಹಾಕಿದ್ದಾರೆ. ನಾನು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ನವನೀತ್ ಕೌರ್​ ಆರೋಪಿಸಿದ್ದರು. ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂಬಿರ್ಲಾರಿಗೂ ದೂರು ನೀಡಿದ್ದರು.

ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿಯಾಗಿದ್ದ ಸಚಿನ್​ ವಾಝೆ ಅಮಾನತಿನ ಬಗ್ಗೆ ಕೌರ್​ ಲೋಕಸಭೆಯಲ್ಲಿ ಮಾತನಾಡಿದ್ದರು. ಮುಕೇಶ್ ಅಂಬಾನಿ ಮನೆ ಮುಂದೆ ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಅಧಿಕಾರಿಯನ್ನು ಅಮಾನತು ಮಾಡಿ, ಅರೆಸ್ಟ್ ಮಾಡಲಾಗಿತ್ತು. ಅದರ ಬಗ್ಗೆ ಮಾತನಾಡಿದ್ದ ಕೌರ್​, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಅವರ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದೂ ಆಗ್ರಹಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

Published On - 4:27 pm, Tue, 8 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?