AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 08, 2021 | 11:51 AM

Share

ಲಖ್ನೋ​: ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಅತ್ಯಂತ ವೇಗ ಗತಿಯಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದೆ. ಕೊರೊನಾದ ತೀವ್ರತೆಯಿಂದ ಸದ್ಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಕೊರೊನಾದ ಆತಂಕ ಸದ್ಯ ಪ್ರಾಣಿಗಳಿಗೂ ಕೂಡ ಸಂಕಷ್ಟ ತಂದೊಡ್ಡಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿನ 2 ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್​ನ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ. ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ