AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 08, 2021 | 11:51 AM

ಲಖ್ನೋ​: ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಅತ್ಯಂತ ವೇಗ ಗತಿಯಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದೆ. ಕೊರೊನಾದ ತೀವ್ರತೆಯಿಂದ ಸದ್ಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಕೊರೊನಾದ ಆತಂಕ ಸದ್ಯ ಪ್ರಾಣಿಗಳಿಗೂ ಕೂಡ ಸಂಕಷ್ಟ ತಂದೊಡ್ಡಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿನ 2 ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್​ನ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ. ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ