AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 08, 2021 | 11:51 AM

Share

ಲಖ್ನೋ​: ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಅತ್ಯಂತ ವೇಗ ಗತಿಯಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದೆ. ಕೊರೊನಾದ ತೀವ್ರತೆಯಿಂದ ಸದ್ಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಕೊರೊನಾದ ಆತಂಕ ಸದ್ಯ ಪ್ರಾಣಿಗಳಿಗೂ ಕೂಡ ಸಂಕಷ್ಟ ತಂದೊಡ್ಡಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿನ 2 ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್​ನ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ. ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

Follow Us
preethi shettigar
preethi shettigar
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ