AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ

ಎಂಎನ್​ಎಂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿದ್ದ ಆರ್. ಮಹೇಂದ್ರನ್​ ಅವರೂ ಕೂಡ ಇತ್ತೀಚೆಗಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಮಲ್ ಹಾಸನ್​ ಮತ್ತು ಪಕ್ಷದ ವಿರುದ್ಧ ಬೇಸರ ಹೊರಹಾಕಿ ರಾಜೀನಾಮೆ ನೀಡಿದ್ದರು.

ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ
ಕಮಲ್​ ಹಾಸನ್​
Lakshmi Hegde
|

Updated on:May 13, 2021 | 11:52 PM

Share

ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರ ಮಕ್ಕಳ್​ ನೀದಿ ಮಯ್ಯಮ್ ಪಕ್ಷದಿಂದ ಹೊರನಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಮತ್ತಿಬ್ಬರು ಪಕ್ಷವನ್ನು ತೊರೆದು, ರಾಜೀನಾಮೆ ನೀಡಿ ಹೋಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಸಂತೋಷ್ ಬಾಬು ಮತ್ತು ಪದ್ಮ ಪ್ರಿಯಾ ಇಂದು ರಾಜೀನಾಮೆ ನೀಡಿದ್ದಾರೆ. ಸಂತೋಷ್ ಬಾಬು ಮಾಜಿ ಐಎಎಸ್ ಅಧಿಕಾರಿ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವೇಲಾಚೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ತಾವು ರಾಜೀನಾಮೆ ನೀಡುತ್ತಿರುವ ವಿಚಾರವನ್ನು ಟ್ವಿಟರ್​ ಮೂಲಕ ತಿಳಿಸಿದ್ದಾರೆ.

ಕಮಲ್ ಹಾಸನ್ ಸೇರಿ ಪಕ್ಷದ ಇತರ ಸದಸ್ಯರು ತೋರಿಸಿದ ಪ್ರೀತಿಗೆ ಧನ್ಯವಾದ ಸಲ್ಲಿಸಿ, ಭಾರವಾದ ಹೃದಯದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಪದ್ಮಪ್ರಿಯಾ ಅವರು ಪರಿಸರ ಹೋರಾಟಗಾರ್ತಿ. ಈ ಬಾರಿ ಚುನಾವಣೆಯಲ್ಲಿ ಮದುರಾವೋಯೆಲ್​​ನಿಂದ ಸ್ಪರ್ಧಿಸಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ಯಶಸ್ಸುಗಳಿಸಲಿ ಎಂದು ಹಾರೈಸಿದ್ದಾರೆ.

ಪಕ್ಷ ತೊರೆದಿದ್ದ ಮಾಜಿ ಉಪಾಧ್ಯಕ್ಷ ಎಂಎನ್​ಎಂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿದ್ದ ಆರ್. ಮಹೇಂದ್ರನ್​ ಅವರೂ ಕೂಡ ಇತ್ತೀಚೆಗಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಮಲ್ ಹಾಸನ್​ ಮತ್ತು ಪಕ್ಷದ ವಿರುದ್ಧ ಬೇಸರ ಹೊರಹಾಕಿ ರಾಜೀನಾಮೆ ನೀಡಿದ್ದರು. ಕಮಲ್​ ಹಾಸನ್​ ಪಕ್ಷವನ್ನು ಮುನ್ನಡೆಸುತ್ತಿರುವ ರೀತಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಇಲ್ಲ ಎಂದೂ ಹೇಳಿದ್ದರು. ಇನ್ನು ಏಪ್ರಿಲ್​ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್​ ಅವರ ಪಕ್ಷ ಒಂದೇ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ.

Published On - 11:37 pm, Thu, 13 May 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!