AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ

ಎಂಎನ್​ಎಂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿದ್ದ ಆರ್. ಮಹೇಂದ್ರನ್​ ಅವರೂ ಕೂಡ ಇತ್ತೀಚೆಗಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಮಲ್ ಹಾಸನ್​ ಮತ್ತು ಪಕ್ಷದ ವಿರುದ್ಧ ಬೇಸರ ಹೊರಹಾಕಿ ರಾಜೀನಾಮೆ ನೀಡಿದ್ದರು.

ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ
ಕಮಲ್​ ಹಾಸನ್​
Lakshmi Hegde
|

Updated on:May 13, 2021 | 11:52 PM

Share

ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರ ಮಕ್ಕಳ್​ ನೀದಿ ಮಯ್ಯಮ್ ಪಕ್ಷದಿಂದ ಹೊರನಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಮತ್ತಿಬ್ಬರು ಪಕ್ಷವನ್ನು ತೊರೆದು, ರಾಜೀನಾಮೆ ನೀಡಿ ಹೋಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಸಂತೋಷ್ ಬಾಬು ಮತ್ತು ಪದ್ಮ ಪ್ರಿಯಾ ಇಂದು ರಾಜೀನಾಮೆ ನೀಡಿದ್ದಾರೆ. ಸಂತೋಷ್ ಬಾಬು ಮಾಜಿ ಐಎಎಸ್ ಅಧಿಕಾರಿ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವೇಲಾಚೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ತಾವು ರಾಜೀನಾಮೆ ನೀಡುತ್ತಿರುವ ವಿಚಾರವನ್ನು ಟ್ವಿಟರ್​ ಮೂಲಕ ತಿಳಿಸಿದ್ದಾರೆ.

ಕಮಲ್ ಹಾಸನ್ ಸೇರಿ ಪಕ್ಷದ ಇತರ ಸದಸ್ಯರು ತೋರಿಸಿದ ಪ್ರೀತಿಗೆ ಧನ್ಯವಾದ ಸಲ್ಲಿಸಿ, ಭಾರವಾದ ಹೃದಯದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಪದ್ಮಪ್ರಿಯಾ ಅವರು ಪರಿಸರ ಹೋರಾಟಗಾರ್ತಿ. ಈ ಬಾರಿ ಚುನಾವಣೆಯಲ್ಲಿ ಮದುರಾವೋಯೆಲ್​​ನಿಂದ ಸ್ಪರ್ಧಿಸಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ಯಶಸ್ಸುಗಳಿಸಲಿ ಎಂದು ಹಾರೈಸಿದ್ದಾರೆ.

ಪಕ್ಷ ತೊರೆದಿದ್ದ ಮಾಜಿ ಉಪಾಧ್ಯಕ್ಷ ಎಂಎನ್​ಎಂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿದ್ದ ಆರ್. ಮಹೇಂದ್ರನ್​ ಅವರೂ ಕೂಡ ಇತ್ತೀಚೆಗಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಮಲ್ ಹಾಸನ್​ ಮತ್ತು ಪಕ್ಷದ ವಿರುದ್ಧ ಬೇಸರ ಹೊರಹಾಕಿ ರಾಜೀನಾಮೆ ನೀಡಿದ್ದರು. ಕಮಲ್​ ಹಾಸನ್​ ಪಕ್ಷವನ್ನು ಮುನ್ನಡೆಸುತ್ತಿರುವ ರೀತಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಇಲ್ಲ ಎಂದೂ ಹೇಳಿದ್ದರು. ಇನ್ನು ಏಪ್ರಿಲ್​ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್​ ಅವರ ಪಕ್ಷ ಒಂದೇ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ.

Published On - 11:37 pm, Thu, 13 May 21

Follow Us
Lakshmi Hegde
Lakshmi Hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ