AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Variant: ದೇಶದಲ್ಲಿ ಇನ್ನೆರಡು ಒಮಿಕ್ರಾನ್​ ಕೇಸ್​ಗಳು ಪತ್ತೆ; ಒಟ್ಟೂ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆ

ದೇಶದಲ್ಲಿ ಮೊದಲ 2 ಒಮಿಕ್ರಾನ್​ ಕೇಸ್​ಗಳು ಪತ್ತೆಯಾಗಿದ್ದು ಕರ್ನಾಟಕದಲ್ಲಿ. ಅದಾದ ಬಳಿ ಗುಜರಾತ್​​ನ ಜಾಮ್​ನಗರದಲ್ಲಿ ಒಬ್ಬರಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಒಬ್ಬರಿಗೆ ಈ ಸೋಂಕು ತಗುಲಿದ್ದು ದೃಢಪಟ್ಟಿತ್ತು.

Omicron Variant: ದೇಶದಲ್ಲಿ ಇನ್ನೆರಡು ಒಮಿಕ್ರಾನ್​ ಕೇಸ್​ಗಳು ಪತ್ತೆ; ಒಟ್ಟೂ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆ
ಕೊರೊನಾ ಟೆಸ್ಟ್​ ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Dec 07, 2021 | 7:52 AM

Share

ಮುಂಬೈನಲ್ಲಿ ಸೋಮವಾರ ಇನ್ನೆರಡು ಒಮಿಕ್ರಾನ್​ ಪ್ರಕರಣ (Omicron Cases)ಗಳು ಪತ್ತೆಯಾಗಿದ್ದು, ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 10 ಆಗಿದೆ ಎಂದು ನ್ಯಾಶನಲ್​ ಇನ್​ಸ್ಟಿಟ್ಯೂಟ್​ ಆಫ್​ ವೈರಲಾಜಿ ತಿಳಿಸಿದೆ. ಇದೀಗ ಒಮಿಕ್ರಾನ್​​ ಪತ್ತೆಯಾದ ಇಬ್ಬರೂ ಕೂಡ ಫೈಜರ್ ಕೊವಿಡ್​ 19 ಲಸಿಕೆ ಪಡೆದವರಾಗಿದ್ದು, ಸದ್ಯಕ್ಕೆ ಯಾವುದೇ ಲಕ್ಷಣಗಳೂ ಇಲ್ಲ. ಇಬ್ಬರನ್ನೂ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಇದರಲ್ಲಿ ಒಬ್ಬಾತನಿಗೆ 37ವರ್ಷವಾಗಿದೆ. ನವೆಂಬರ್​ 25ರಂದು ದಕ್ಷಿಣ ಆಫ್ರಿಕಾದ ಜೊಹಾನ್ಸ್​ಬರ್ಗ್​​ನಿಂದ ಮುಂಬೈಗೆ ಆಗಮಿಸಿದ್ದರು. ಹಾಗೇ, ಇನ್ನೊಬ್ಬಾತ 36ವರ್ಷದ ಯುವಕನಾಗಿದ್ದು, ಅದೇ ದಿನ ಯುಎಸ್​​ನಿಂದ ಆಗಮಿಸಿದ್ದರು.  ಇವರಿಬ್ಬರ 5 ಮಂದಿ ಪ್ರಾಥಮಿಕ ಸಂಪರ್ಕಿತರು ಮತ್ತು 315 ದ್ವಿತೀಯ ಹಂತದ ಸಂಪರ್ಕಿತರನ್ನು ಟ್ರೇಸ್​ ಮಾಡಿ, ತಪಾಸಣೆಗೆ ಒಳಪಡಿಸಲಾಗಿದೆ. ಹಾಗೇ, ಇನ್ನೂ ಒಂದಷ್ಟು ಮಂದಿಯನ್ನು ಟ್ರೇಸ್​ ಮಾಡುವ ಕಾರ್ಯ ನಡೆಯುತ್ತಿದೆ.

ದೇಶದಲ್ಲಿ ಮೊದಲ 2 ಒಮಿಕ್ರಾನ್​ ಕೇಸ್​ಗಳು ಪತ್ತೆಯಾಗಿದ್ದು ಕರ್ನಾಟಕದಲ್ಲಿ. ಅದಾದ ಬಳಿ ಗುಜರಾತ್​​ನ ಜಾಮ್​ನಗರದಲ್ಲಿ ಒಬ್ಬರಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಒಬ್ಬರಿಗೆ ಈ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಆದರೆ ಭಾನುವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಏಳು ಮಂದಿಯಲ್ಲಿ ಈ ಸೋಂಕು ದೃಢಪಟ್ಟಿತ್ತು. ಅದಾದ ರಾಜಸ್ಥಾನದ ಜೈಪುರದ ಒಂದೇ ಕುಟುಂಬದ 9 ಮಂದಿಗೂ ಒಮಿಕ್ರಾನ್​ ತಗುಲಿದ್ದು ಗೊತ್ತಾಯ್ತು. ಈ ಮಧ್ಯೆ ದೆಹಲಿಯಲ್ಲಿಯೂ ಒಬ್ಬರಿಗೆ ಸೋಂಕು ದೃಢವಾಗಿತ್ತು. ಅವರು ಲೋಕ ನಾಯಕ ಜೈ ಪ್ರಕಾಶ್​ ನಾರಾಯಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ಈ ಒಮಿಕ್ರಾನ್​ ಹರಡುವಿಕೆ ಪ್ರಮಾಣ ಜಾಸ್ತಿಯಿರುವ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನದ ವೇಗವನ್ನೂ ಚುರುಕುಗೊಳಿಸಲಾಗಿದೆ.

ಇದನ್ನೂ ಓದಿ: David Warner: ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಂದ ಡೇವಿಡ್ ವಾರ್ನರ್​ಗೆ ವಿಶೇಷ ಬೇಡಿಕೆ: ಈಡೇರಿಸ್ತಾರ ಆಸೀಸ್ ಕ್ರಿಕೆಟಿಗ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ