AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು

ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇತ್ತೀಚೆಗಷ್ಟೇ ಹೇಳಿದ್ದರು. ಹಾಗೇ, ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು.

ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 25, 2021 | 9:06 AM

Share

ಲಖನೌ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿರುವ ಮಕ್ಕಳ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಆಕ್ಸಿಜನ್​ ಇಲ್ಲದೆ ಇಬ್ಬರು ನವಜಾತ ಶಿಶುಗಳು ಮೃತಪಟ್ಟ ಹೃದಯವಿದ್ರಾವಕ ಘಟನೆ ಶನಿವಾರ ರಾತ್ರಿ ನಡೆದಿದೆ. ಬಾರ್ಬಂಕಿಯಲ್ಲಿರುವ ಎರಡು ಆಸ್ಪತ್ರೆಗಳು ತಮ್ಮಲ್ಲಿ ಆಮ್ಲಜನಕ ಖಾಲಿ ಆಗಿರುವ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದರು. ಆದರೆ ಅಲ್ಲಿಗೆ ಪೂರೈಕೆ ಆಗಿರಲಿಲ್ಲ.

ಈ ಎರಡರಲ್ಲಿ ಒಂದು ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಅವಳಿ ಮಕ್ಕಳು ಜನಿಸಿದ್ದವು. ಅವಕ್ಕಿಬ್ಬರಿಗೂ ಆಮ್ಲಜನಕದ ಅಗತ್ಯವಿತ್ತು. ಆದರೆ ಆಮ್ಲಜನಕ ಪೂರೈಕೆ ಆಗದ ಕಾರಣ ಮಕ್ಕಳಿಗೆ ಕೊಡಲು ಸಾಧ್ಯವಾಗದೆ, ಇಬ್ಬರ ಜೀವವೂ ಹೋಗಿದೆ.

ವೈದ್ಯಕೀಯ ಆಮ್ಲಜನಕ ಪೂರೈಕೆ ವಿಚಾರದಲ್ಲಿ ಸರ್ಕಾರ, ಇಲಾಖೆಗಳು ಒತ್ತಡದಲ್ಲಿವೆ. ನಮ್ಮ ಕೈಲಾದಷ್ಟು ಮಟ್ಟಿಗೆ ಆಕ್ಸಿಜನ್ ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು, ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇತ್ತೀಚೆಗಷ್ಟೇ ಹೇಳಿದ್ದರು. ಹಾಗೇ, ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು. ಈ ಆಕ್ಸಿಜನ್​ ಅಭಾವ ಆಗುತ್ತಿರುವುದು ಕೇವಲ ಉತ್ತರಪ್ರದೇಶದಲ್ಲಿ ಅಷ್ಟೇ ಅಲ್ಲ. ದೆಹಲಿಯಲ್ಲೂ ತೀವ್ರವಾಗಿ ಕಾಡುತ್ತಿದೆ. ಎರಡು ಆಸ್ಪತ್ರೆಗಳಲ್ಲಿ 20ಕ್ಕೂ ಹೆಚ್ಚು ರೋಗಿಗಳು ಆಕ್ಸಿಜನ್ ಇಲ್ಲದೆ ಮೃತಪಟ್ಟಿದ್ದಾರೆ. ಕೆಲವು ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಕೂಡ ಖಡಕ್​ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಕೊಡಗು ಜನರ ಕನಸು ಕೊನೆಗೂ ನನಸು

Gold Rate Today: ಏಪ್ರಿಲ್ 25ರಂದು ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನ,ಬೆಳ್ಳಿ ದರ ಹೀಗಿದೆ!

2 newborns die at hospital in Uttar Pradesh due to lack of oxygen

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್