AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು

Afghanistan Crisis: ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 23, 2021 | 6:02 PM

Share

ದೆಹಲಿ: ತಾಲಿಬಾನ್​ ಉಗ್ರರ ಹಿಡಿತಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ (Afghanistan)ದಲ್ಲಿರುವ ಭಾರತೀಯರನ್ನು ವಾಪಸ್​ ದೇಶಕ್ಕೆ ತರುವ ಕಾರ್ಯ ಭರದಿಂದ ಸಾಗುತ್ತಿದೆ. ದಿನಕ್ಕೆ ಎರಡು ವಿಮಾನಗಳು ಕಾಬೂಲ್​ ಏರ್​ಪೋರ್ಟ್(Kabul Airport)​ನಿಂದ ಹೊರಟು ಭಾರತ ತಲುಪುತ್ತಿದ್ದು, ವಿವಿಧ ಬ್ಯಾಚ್​ಗಳ ಮೂಲಕ ಜನರನ್ನು ಕರೆತರಲಾಗುತ್ತಿದೆ. ಆದರೀಗ ಈ ಸ್ಥಳಾಂತರದ ಮಧ್ಯೆ ಕೊರೊನಾ ಆತಂಕ ಶುರುವಾಗಿದೆ. ಇಂದು ಬೆಳಗ್ಗೆ ಅಫ್ಘಾನ್(Afghan)​​ನಿಂದ ದೆಹಲಿಗೆ ಬಂದ 146 ಭಾರತೀಯ ಪ್ರಯಾಣಿಕರಲ್ಲಿ, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಂದ್ರ ಕುಮಾರ್​ ತಿಳಿಸಿದ್ದಾರೆ.

ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು. ಅಲ್ಲಿಂದ ನಾಲ್ಕು ವಿವಿಧ ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದಿದ್ದಾರೆ. ಹಾಗೇ, ಭಾನುವಾರ ಸುಮಾರು 400 ಜನರನ್ನು ವಿವಿಧ ವಿಮಾನಗಳ ಮೂಲಕ ಅಪ್ಘಾನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಅದರಲ್ಲಿ 329 ಮಂದಿ ಭಾರತೀಯರೇ ಆಗಿದ್ದಾರೆ. ಅಫ್ಘಾನ್​ನಲ್ಲಿರುವ ಹಿಂದು ಮತ್ತು ಸಿಖ್​ ಸಮುದಾಯದವರನ್ನೂ ಭಾರತಕ್ಕೆ ಕರೆತರಲಾಗುತ್ತಿದೆ.

ಸ್ಥಳಾಂತರ ಪ್ರಕ್ರಿಯೆಯೂ ಸವಾಲು ಕಾಬೂಲ್​ ನ್ನು ಕಳೆದ ಭಾನುವಾರ ತಾಲಿಬಾನ್​ ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿಂದ ಹೇಗಾದರೂ ಸರಿ ಪಾರಾಗಬೇಕು ಎಂದು ಹೋರಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ಏರ್​ಪೋರ್ಟ್​ನಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ನೂಕು-ನುಗ್ಗಲಿನಿಂದಾಗಿ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಈ ಮಧ್ಯೆ ಯುಎಸ್​ಗೆ ಐಸಿಸ್​ ಉಗ್ರರ ಬೆದರಿಕೆಯೂ ಇದೆ. ಕಾಬೂಲ್​ ವಿಮಾನ ನಿಲ್ದಾಣವನ್ನೇ ಸ್ಫೋಟಿಸುತ್ತೇವೆ ಎಂದು ಹೇಳಿದ್ದಾರೆಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. ಆಗಸ್ಟ್​ 31ರೊಳಗೆ ಸ್ಥಳಾಂತರ ಪ್ರಕ್ರಿಯೆ ಮುಗಿಸಬೇಕು ಎಂಬ ಗುರಿಯನ್ನು ಅಮೆರಿಕ ಇಟ್ಟುಕೊಂಡಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

ನಮ್ಮಕ್ಕ ಸುಧಾಕ್ಕನಿಗೆ ದೊಡ್ಡ ನಮಸ್ಕಾರ: ಕಿದ್ವಾಯಿ ಆಸ್ಪತ್ರೆಯ ವಿವಿಧ ಘಟಕಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತು

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ