AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು

Afghanistan Crisis: ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Aug 23, 2021 | 6:02 PM

Share

ದೆಹಲಿ: ತಾಲಿಬಾನ್​ ಉಗ್ರರ ಹಿಡಿತಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ (Afghanistan)ದಲ್ಲಿರುವ ಭಾರತೀಯರನ್ನು ವಾಪಸ್​ ದೇಶಕ್ಕೆ ತರುವ ಕಾರ್ಯ ಭರದಿಂದ ಸಾಗುತ್ತಿದೆ. ದಿನಕ್ಕೆ ಎರಡು ವಿಮಾನಗಳು ಕಾಬೂಲ್​ ಏರ್​ಪೋರ್ಟ್(Kabul Airport)​ನಿಂದ ಹೊರಟು ಭಾರತ ತಲುಪುತ್ತಿದ್ದು, ವಿವಿಧ ಬ್ಯಾಚ್​ಗಳ ಮೂಲಕ ಜನರನ್ನು ಕರೆತರಲಾಗುತ್ತಿದೆ. ಆದರೀಗ ಈ ಸ್ಥಳಾಂತರದ ಮಧ್ಯೆ ಕೊರೊನಾ ಆತಂಕ ಶುರುವಾಗಿದೆ. ಇಂದು ಬೆಳಗ್ಗೆ ಅಫ್ಘಾನ್(Afghan)​​ನಿಂದ ದೆಹಲಿಗೆ ಬಂದ 146 ಭಾರತೀಯ ಪ್ರಯಾಣಿಕರಲ್ಲಿ, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಂದ್ರ ಕುಮಾರ್​ ತಿಳಿಸಿದ್ದಾರೆ.

ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು. ಅಲ್ಲಿಂದ ನಾಲ್ಕು ವಿವಿಧ ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದಿದ್ದಾರೆ. ಹಾಗೇ, ಭಾನುವಾರ ಸುಮಾರು 400 ಜನರನ್ನು ವಿವಿಧ ವಿಮಾನಗಳ ಮೂಲಕ ಅಪ್ಘಾನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಅದರಲ್ಲಿ 329 ಮಂದಿ ಭಾರತೀಯರೇ ಆಗಿದ್ದಾರೆ. ಅಫ್ಘಾನ್​ನಲ್ಲಿರುವ ಹಿಂದು ಮತ್ತು ಸಿಖ್​ ಸಮುದಾಯದವರನ್ನೂ ಭಾರತಕ್ಕೆ ಕರೆತರಲಾಗುತ್ತಿದೆ.

ಸ್ಥಳಾಂತರ ಪ್ರಕ್ರಿಯೆಯೂ ಸವಾಲು ಕಾಬೂಲ್​ ನ್ನು ಕಳೆದ ಭಾನುವಾರ ತಾಲಿಬಾನ್​ ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿಂದ ಹೇಗಾದರೂ ಸರಿ ಪಾರಾಗಬೇಕು ಎಂದು ಹೋರಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ಏರ್​ಪೋರ್ಟ್​ನಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ನೂಕು-ನುಗ್ಗಲಿನಿಂದಾಗಿ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಈ ಮಧ್ಯೆ ಯುಎಸ್​ಗೆ ಐಸಿಸ್​ ಉಗ್ರರ ಬೆದರಿಕೆಯೂ ಇದೆ. ಕಾಬೂಲ್​ ವಿಮಾನ ನಿಲ್ದಾಣವನ್ನೇ ಸ್ಫೋಟಿಸುತ್ತೇವೆ ಎಂದು ಹೇಳಿದ್ದಾರೆಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. ಆಗಸ್ಟ್​ 31ರೊಳಗೆ ಸ್ಥಳಾಂತರ ಪ್ರಕ್ರಿಯೆ ಮುಗಿಸಬೇಕು ಎಂಬ ಗುರಿಯನ್ನು ಅಮೆರಿಕ ಇಟ್ಟುಕೊಂಡಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

ನಮ್ಮಕ್ಕ ಸುಧಾಕ್ಕನಿಗೆ ದೊಡ್ಡ ನಮಸ್ಕಾರ: ಕಿದ್ವಾಯಿ ಆಸ್ಪತ್ರೆಯ ವಿವಿಧ ಘಟಕಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ