AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು

Afghanistan Crisis: ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು.

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 23, 2021 | 6:02 PM

Share

ದೆಹಲಿ: ತಾಲಿಬಾನ್​ ಉಗ್ರರ ಹಿಡಿತಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ (Afghanistan)ದಲ್ಲಿರುವ ಭಾರತೀಯರನ್ನು ವಾಪಸ್​ ದೇಶಕ್ಕೆ ತರುವ ಕಾರ್ಯ ಭರದಿಂದ ಸಾಗುತ್ತಿದೆ. ದಿನಕ್ಕೆ ಎರಡು ವಿಮಾನಗಳು ಕಾಬೂಲ್​ ಏರ್​ಪೋರ್ಟ್(Kabul Airport)​ನಿಂದ ಹೊರಟು ಭಾರತ ತಲುಪುತ್ತಿದ್ದು, ವಿವಿಧ ಬ್ಯಾಚ್​ಗಳ ಮೂಲಕ ಜನರನ್ನು ಕರೆತರಲಾಗುತ್ತಿದೆ. ಆದರೀಗ ಈ ಸ್ಥಳಾಂತರದ ಮಧ್ಯೆ ಕೊರೊನಾ ಆತಂಕ ಶುರುವಾಗಿದೆ. ಇಂದು ಬೆಳಗ್ಗೆ ಅಫ್ಘಾನ್(Afghan)​​ನಿಂದ ದೆಹಲಿಗೆ ಬಂದ 146 ಭಾರತೀಯ ಪ್ರಯಾಣಿಕರಲ್ಲಿ, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಂದ್ರ ಕುಮಾರ್​ ತಿಳಿಸಿದ್ದಾರೆ.

ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್​ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್​ನಿಂದ ದೋಹಾಕ್ಕೆ ಹೋಗಿದ್ದರು. ಅಲ್ಲಿಂದ ನಾಲ್ಕು ವಿವಿಧ ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದಿದ್ದಾರೆ. ಹಾಗೇ, ಭಾನುವಾರ ಸುಮಾರು 400 ಜನರನ್ನು ವಿವಿಧ ವಿಮಾನಗಳ ಮೂಲಕ ಅಪ್ಘಾನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಅದರಲ್ಲಿ 329 ಮಂದಿ ಭಾರತೀಯರೇ ಆಗಿದ್ದಾರೆ. ಅಫ್ಘಾನ್​ನಲ್ಲಿರುವ ಹಿಂದು ಮತ್ತು ಸಿಖ್​ ಸಮುದಾಯದವರನ್ನೂ ಭಾರತಕ್ಕೆ ಕರೆತರಲಾಗುತ್ತಿದೆ.

ಸ್ಥಳಾಂತರ ಪ್ರಕ್ರಿಯೆಯೂ ಸವಾಲು ಕಾಬೂಲ್​ ನ್ನು ಕಳೆದ ಭಾನುವಾರ ತಾಲಿಬಾನ್​ ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿಂದ ಹೇಗಾದರೂ ಸರಿ ಪಾರಾಗಬೇಕು ಎಂದು ಹೋರಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ಏರ್​ಪೋರ್ಟ್​ನಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ನೂಕು-ನುಗ್ಗಲಿನಿಂದಾಗಿ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಈ ಮಧ್ಯೆ ಯುಎಸ್​ಗೆ ಐಸಿಸ್​ ಉಗ್ರರ ಬೆದರಿಕೆಯೂ ಇದೆ. ಕಾಬೂಲ್​ ವಿಮಾನ ನಿಲ್ದಾಣವನ್ನೇ ಸ್ಫೋಟಿಸುತ್ತೇವೆ ಎಂದು ಹೇಳಿದ್ದಾರೆಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. ಆಗಸ್ಟ್​ 31ರೊಳಗೆ ಸ್ಥಳಾಂತರ ಪ್ರಕ್ರಿಯೆ ಮುಗಿಸಬೇಕು ಎಂಬ ಗುರಿಯನ್ನು ಅಮೆರಿಕ ಇಟ್ಟುಕೊಂಡಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

ನಮ್ಮಕ್ಕ ಸುಧಾಕ್ಕನಿಗೆ ದೊಡ್ಡ ನಮಸ್ಕಾರ: ಕಿದ್ವಾಯಿ ಆಸ್ಪತ್ರೆಯ ವಿವಿಧ ಘಟಕಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತು

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ